
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕುರಿತು ಅಪಾರ ಒಲವಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಿಜೆಪಿ ವರಿಷ್ಠರ ಮನವಿ ಮೇರೆಗೆ ಕುಮಾರಸ್ವಾಮಿಯವರು ಚಿಕ್ಕಬಳ್ಳಾಪುರದಿಂದ ಸ್ವರ್ಥಿಸುವ ಸಾಧ್ಯತೆ ಇದೆ .ಬಿಜೆಪಿ ಪಕ್ಷದಿಂದ ಸ್ವರ್ಥಿಸಲು ಈಗಾಗಲೇ ಯಲಹಂಕ ಶಾಸಕರಾದ ಎಸ್.ಆರ್. ವಿಶ್ವನಾಥ್ ಮಗ ಅಲೋಕ್ ವಿಶ್ವನಾಥ್ ಹಾಗೂ ಮಾಜಿ ಸಚಿವರಾದ ಡಾ.ಕೆ.ಸುಧಾಕರ್ ನಡುವೆ ಪೈಪೋಟಿ ನಡೆಯುತ್ತಿದೆ . ವರಿಷ್ಠರ ಮನವಿ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸ್ಪರ್ಧಿಸಿದ್ದೆ ಆದಲ್ಲಿ , ಕಾರ್ಯಕರ್ತರು ಒಮ್ಮತದಿಂದ ಶ್ರಮಿಸಿ ಅಭೂತಪೂರ್ವ ಯಶಸ್ಸುಸಾಧಿಸುವಲ್ಲಿ ಸಂಶಯವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಹರೀಶ್ ಗೌಡರವರು ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಎರಡನೇ ವರ್ಷದ ವಾರ್ಷಿಕೋತ್ಸವದ ಸಮಾರಂಭದಲ್ಲಿ ಭಾಗವಹಿಸಿದ ಹರೀಶ್ ಗೌಡರವರು ನಂತರ ಮಾಧ್ಯಮದೊಂದಿಗೆ ಮಾತನಾಡಿದರು. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಪುಟ್ಟಣ್ಣಯ್ಯ ಕಳೆದ ಚುನಾವಣೆಯಲ್ಲಿ ಬೋಗಸ್ ಮತಗಳ ಮೂಲಕ ಗೆಲವು ಸಾಧಿಸುತ್ತಿದ್ದರು, ಈ ಬಾರಿ ನಕಲಿ ಮತದಾರರ ಹಾವಳಿಗೆ ಕಡಿವಾಣ ಹಾಕಲಾಗಿದೆ. ಶಿಕ್ಷಕರು ಪ್ರಜ್ಞಾವಂತರಿದ್ದಾರೆ . ಪುಟ್ಟಣ್ಣಯ್ಯ ನವರು ಅಧಿಕಾರದ ಆಸೆಗೆ ಎರಡು ವರ್ಷಕ್ಕೂಮ್ಮೆ ಪಕ್ಷದಿಂದ ಪಕ್ಷಕ್ಕೆ ಹಾರುತ್ತಾರೆ, ಈ ಚುನಾವಣೆಯಲ್ಲಿ ಶಿಕ್ಷಕರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಮೈತ್ರಿಯಾಗಿರುವುದರಿಂದ ಗೆಲವು ಮತ್ತಷ್ಟು ಸುಲಭವಾಗಲಿದೆ ಎಂದರು. ನಮ್ಮ ಪಕ್ಷದಿಂದ ಮೈತ್ರಿ ಅಭ್ಯರ್ಥಿಯಾಗಿರುವ ಎ.ಪಿ.ರಂಗನಾಥ್ ಗೆಲುವು ಸಾಧಿಸಲಿದ್ದಾರೆ.
ಲೋಕಸಭಾ ಚುನಾವಣಾ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಎರಡು ಸ್ಥಾನಗಳಲ್ಲಿ ಗೆಲುವು ಸಾಧ್ಯತೆ ಇದೆ ಈ ಕುರಿತು ಪ್ರತಿಕ್ರಿಯಿಸಿದ ಅವರು ಚುನಾವಣಾ ಸಮೀಕ್ಷೆಗಳ ಬಗ್ಗೆ ನಮಗೆ ನಂಬಿಕೆ ಇಲ್ಲ, ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿದ್ವು, ಆದರೆ ಚುನಾವಣಾ ಫಲಿತಾಂಶ ಬೇರೆಯೇ ಆಗಿತ್ತು, ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ 28 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಸೀಟ್ ಹಂಚಿಕೆಯಲ್ಲಿ ಜೆಡಿಎಸ್ ಗೆ ಸಿಗುವ ಎಲ್ಲಾ ಸ್ಥಾನಗಳಲ್ಲೂ ಗೆಲ್ಲುವುದಾಗಿ ಹೇಳಿದರು
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿನ ಸ್ವರ್ಥೆಗಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಷ್ ನಡುವೆ ಪೈಪೋಟಿ ಇದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಇದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರತಿಕ್ರಿಯೆ ನೀಡಿದ ಅವರು ಸ್ಥಳೀಯ ಮುಖಂಡರು ನಿಖಿಲ್ ಕುಮಾರಸ್ವಾಮಿ ಮತ್ತು ಕುಮಾರಸ್ವಾಮಿ ಇಬ್ಬರಿಗೂ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ವರ್ಥಿಸುವಂತೆ ಮನವಿ ಮಾಡಿದ್ದಾರೆ, ಇತ್ತಾ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿ ಪಕ್ಷದಿಂದಲೇ ಮೂವರು ಪೈಪೋಟಿ ಇದ್ದು, ಬಿಜೆಪಿಯ ಮುಖಂಡರಿಂದಲೇ ಕುಮಾರಸ್ವಾಮಿಯವರು ಸ್ವರ್ಥಿಸುವಂತೆ ಸೂಚನೆ ಬಂದಿದೆ, ಕುಮಾರಸ್ವಾಮಿ ಸ್ವರ್ಥಿಸಿದ್ದಾರೆ ಅವರ ಗೆಲುವಿಗಾಗಿ ನಾವು ಕ್ಷೇತ್ರದಲ್ಲಿ ಇನ್ನೂ ಹೆಚ್ಚಾಗಿ ದುಡಿಯುತ್ತೆವೆ. ಅವರ ಹಿಂದಿನ ಸೋಲಿನ ನೋವು ಮರೆಸುವುದ್ದಾಗಿ ಹೇಳಿದರು.