
ಪರಮ ಪೂಜ್ಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಫೆಬ್ರವರಿ 15 ಮತ್ತು 16ರಂದು ಶ್ರೀ ಕ್ಷೇತ್ರ ಪುಣ್ಯಧಾಮದಲ್ಲಿ ಶ್ರೀ ಜಗದ್ಗುರು ಹಸರಂಗಿ ಅಜ್ಜಯ್ಯನವರ ಹಾಗೂ ಬಾಲ ತ್ರಿಪುರ ಸುಂದರಿ ಅಮ್ಮನವರ ವಿಗ್ರಹ ಪ್ರಾಣಾ ಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಲಿದೆ ಎಂದು ಶ್ರೀ ಕ್ಷೇತ್ರ ಪುಣ್ಯಧಾಮದ ಪೀಠಾಧ್ಯಕ್ಷರಾದ ಗುರುದೇವ್ ಗುರೂಜಿ ತಿಳಿಸಿದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕಸಂದ್ರ ಶ್ರೀ ಕ್ಷೇತ್ರ ಪುಣ್ಯಧಾಮದಲ್ಲಿ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಕ್ತರ ಉದ್ಧಾರಕ್ಕಾಗಿಯೇ ಇರುವ ಜಗದ್ಗುರು ಶ್ರೀ ಹಸರಂಗಿ ಅಜ್ಜಯ್ಯನವರ ಹಾಗೂ ಬಾಲ ತ್ರಿಪುರ ಸುಂದರಿ ಅಮ್ಮನವರ ವಿಗ್ರಹಗಳನ್ನು ಫೆಬ್ರವರಿ 15 ಮತ್ತು 16ನೇ ದಿನಾಂಕದಂದು ಪ್ರಾಣ ಪ್ರತಿಷ್ಠಾಪನೆಯನ್ನು ಮಾಡುವ ಮೂಲಕ ಭಕ್ತ ಲೋಕಕ್ಕೆ ಅರ್ಪಿಸಲಾಗುತ್ತದೆ .
ಫೆಬ್ರವರಿ 15ರಂದು ವಿಶೇಷವಾಗಿ ಗೋಪೂಜೆ ,ಪ್ರಾಣ ಪ್ರತಿಷ್ಠಾಪನೆ, ಗೋ ಪ್ರವೇಶ, ಮಹಾ ಗಣಪತಿ ಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ ಸೇರಿದಂತೆ ಹಲವು ವಿಶೇಷ ಪೂಜೆಗಳನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಹಲವು ಮಠಗಳ ಪರಮ ಪೂಜ್ಯ ಮಠಾಧ್ಯಕ್ಷರು, ಪೂಜ್ಯ ಸ್ವಾಮೀಜಿಗಳು ಆಗಮಿಸಲಿದ್ದಾರೆ. ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಶಾಸಕರಾದ ಶ್ರೀ ಧೀರಜ್ ಮುನಿರಾಜು ನೆರವೇರಿಸಲಿದ್ದು ಮುಖ್ಯ ಅತಿಥಿಗಳಾಗಿ ಪೊಲೀಸ್ ಅಧಿಕಾರಿಗಳಾದ ಕೆ. ಏನ್.ನಾಗರಾಜು, ಬಮುಲ್ ನಿರ್ದೇಶಕರಾದ ಬಿಸಿ ಆನಂದ್, ಸೇರಿದಂತೆ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಶ್ರೀ ಹಸರಂಗಿ ಅಜ್ಜಯ ಚಾರಿಟೇಬಲ್ ಟ್ರಸ್ಟ್ ನ ಪದಾಧಿಕಾರಿಗಳು, ಹಾಗೂ ಭಕ್ತಗಣ ಉಪಸ್ಥಿರಿದರು