
ರಾಜ್ಯಾದ್ಯಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ಆಚರಣೆಯನ್ನು ಅಭಿಮಾನಿಗಳು ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದು. ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ದರ್ಶನ್ ಅಭಿಮಾನಿಗಳಿಂದ ವಿಶೇಷ ರೀತಿಯಲ್ಲಿ ತಮ್ಮ ನೆಚ್ಚಿನ ನಾಯಕ ನಟನ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಯಿತು.
ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಹಚ್ಚುವ ಮೂಲಕ ವಿಶೇಷವಾಗಿ ನವೀನ್ ಮತ್ತು ತಂಡ ನಟದರ್ಶನ್ ರವರ ಹುಟ್ಟು ಹಬ್ಬವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ನವೀನ್ ಮಾತನಾಡಿ ನಟ ದರ್ಶನ್ ಸದಾ ರೈತರ ಪರ ಹಾಗೂ ಸಮಾಜಕ್ಕೆ ಸಂದೇಶ ಸಾರುವ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ನಮ್ಮೆಲ್ಲರಿಗೂ ಉತ್ತಮ ಸಂದೇಶ ನೀಡುತ್ತಿದ್ದಾರೆ. ಅಂತೆಯೇ ನಾವು ಇಂದು ನಮ್ಮ ನೆಚ್ಚಿನ ನಾಯಕ ನಟ ದರ್ಶನ್ ರವರ ಹುಟ್ಟು ಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಮಕ್ಕಳೊಂದಿಗೆ ಸಂಭ್ರಮದ ಆಚರಣೆ ಮಾಡುತ್ತಿದ್ದೇವೆ. ಅದ್ದೂರಿಯಾಗಿ ಪಟಾಕಿ ಸಿಡಿಸಿ ದುಂದು ವೆಚ್ಚ ಮಾಡುವ ಬದಲು ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಹಚ್ಚುವುದು ಉತ್ತಮ ಎಂದು ನಮ್ಮೆಲ್ಲರ ಅಭಿಪ್ರಾಯ ಹಾಗಾಗಿ ಶಾಲಾ ಮಕ್ಕಳಿಗೆ ಸಿಹಿ ಹಂಚುತ್ತಿದ್ದೇವೆ ಎಂದು ತಿಳಿಸಿದರು
ಅಭಿಮಾನಿ ಮಂಜುನಾಥ್ ಮಾತನಾಡಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಕಲಾ ಸೇವೆಯನ್ನು ಗುರುತಿಸಿ ಅವರಿಗೆ ಭೂಮಿಪುತ್ರ ಎಂಬ ಬಿರುದು ನೀಡಲಾಗಿದೆ. ಸದಾ ರೈತರ ಬಗ್ಗೆ ಕಾಳಜಿ ಹೊಂದಿದ್ದು ತಮ್ಮ ನೇರ ಮಾತುಗಳಿಂದಲೇ ಅಭಿಮಾನಿಗಳ ಮನಸ್ಸನ್ನು ಗೆದ್ದಿರುವ ಸಾಮ್ರಾಟ ದರ್ಶನ್ ರವರ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸುತ್ತಿದ್ದೇವೆ. ಮಕ್ಕಳಲ್ಲೂ ರಂಗಭೂಮಿ, ಸಿನಿಮಾ ಕ್ಷೇತ್ರ, ನಾಟಕ ಸೇರಿದಂತೆ ಕಲೆ ಕುರಿತು ಅಭಿಮಾನ ಮೂಡಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ದರ್ಶನ್ ಅಭಿಮಾನಿಗಳಾದಂತಹ ನವೀನ್, ಸುನಿಲ್ ,ಉಮೇಶ್, ನಾರಾಯಣ, ಸಿ ಮಂಜುನಾಥ, ಎಂ ಮಂಜುನಾಥ, ಕಿರಣ್, ಹರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು