ಮೈಸೂರು ಕಾಗದ ಕಾರ್ಖಾನೆ (MPM)ಗೆ ಮರುಜೀವ : ಕಾರ್ಖಾನೆ ಪುನಶ್ಚೇತನ ಕುರಿತು ಮಹತ್ವದ ಸಭೆ

Spread the love

ಗುಣಮಟ್ಟದ ಕಾಗದಕ್ಕೆ ದೇಶದಲ್ಲೇ ಹೆಸರುವಾಸಿಯಾಗಿದ್ದ ಮೈಸೂರು ಕಾಗದ ಕಾರ್ಖಾನೆ (MPM)ಗೆ ಬೀಗ ಮುದ್ರೆ ಬಿದ್ದಿದ್ದು ಪುನಶ್ಚೇತನ ನೀಡುವ ಕುರಿತಂತೆ ಇಂದು ಮಹತ್ವದ ಸಭೆ ನಡೆಸಿದೆ.

40 ವರ್ಷಗಳ ಅವಧಿಗೆ 20,005 ಹೆಕ್ಟೇರ್ ಅರಣ್ಯ ಭೂಮಿ ಹಸ್ತಾಂತರ; ನೀಲಗಿರಿ ಬೆಳೆಯಲು MPMಗೆ ಅವಕಾಶ ನೀಡುವ ಸಂಬಂಧ ಚರ್ಚಿಸಿ, ಸೂಕ್ತ ತೀರ್ಮಾನ ಮಾಡಲು ಉನ್ನತಾಧಿಕಾರ ಸಮಿತಿ ರಚಿಸಲು ಸಭೆಯಲ್ಲಿ ನಿರ್ಣಯಿಸಿ, ತಿಂಗಳಲ್ಲಿ ವರದಿ ಪಡೆದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು

ಈ ಸಂದರ್ಭದಲ್ಲಿ ಅರಣ್ಯ ಸಚಿವರಾದ ಶ್ರೀ ಈಶ್ವರ್ ಖಂಡ್ರೆ, ವರ್ಚುವಲ್ ಮೂಲಕ ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧುಬಂಗಾರಪ್ಪ, ಭದ್ರಾವತಿಯ ಶಾಸಕರಾದ ಶ್ರೀ ಬಿ.ಕೆ. ಸಂಗಮೇಶ್ವರ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಸೆಲ್ವಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.