ದೊಡ್ಡಬಳ್ಳಾಪುರ ತಾಲ್ಲೂಕಿನ ಭಾಷೆಟ್ಟಿಹಳ್ಳಿಯಲ್ಲಿ ನೆಡೆಯುತ್ತಿರುವ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗಿರುವ ಅಭಿನಂದನಾ ಪತ್ರದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜು ಅವರ ಸಹಿ ನಕಲು ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಹೌದು ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಫೋಟೋಗಳು ಹರಿದಾಡುತ್ತಿದ್ದು ಟೀಕೆಗೆ ಗುರಿಯಾಗಿದೆ ಈ ಕುರಿತು ಮಾನ್ಯ ಶಾಸಕರು ಗಮನಹರಿಸಬೇಕಿದ್ದು, ಸಾಹಿತ್ಯ ಸಮ್ಮೇಳನ ಆಯೋಜಕರು ಸ್ಪಷ್ಟಿಕಾರಣ ನೀಡಬೇಕಿದೆ..
