ದೊಡ್ಡಬಳ್ಳಾಪುರ : ಸುಸ್ಥಿರ ತಂತ್ರಜ್ಞಾನವು ಹೇಗೆ ಬೆಳೆಯಬೇಕೆಂಬುದರ ಬಗ್ಗೆ ಸಂಪೂರ್ಣ ಮರುಚಿಂತನೆಯನ್ನು ನಡೆಸುವ ಅಗತ್ಯವಿದೆ. ಗೀತಂ ದಾಖಲೆಯ ಸಮಯದಲ್ಲಿ MURTI ಯನ್ನು ಸ್ಥಾಪಿಸಿರುವುದು ನನಗೆ ಸಂತೋಷ ಎನಿಸಿದೆ. 13 ಪ್ರಮುಖ ಕ್ಷೇತ್ರಗಳೊಂದಿಗೆ ಇದು ಸರಿಯಾದ ಆರಂಭವಾಗಿದೆ ಮತ್ತು ಇವುಗಳು ನಾವು ಬದಲಾವಣೆಯನ್ನು ಮಾಡುವ ಕ್ಷೇತ್ರಗಳಾಗಿವೆ. ಗೀತಂ ಮಾತ್ರವಲ್ಲದೇ ಸಮಾಜಕ್ಕೂ ಇದರಿಂದ ಪ್ರಯೋಜನವಾಗುತ್ತದೆ. ವಿಶ್ವವಿದ್ಯಾನಿಲಯವನ್ನು ಉದ್ಯಮ ಮತ್ತು ಸಮಾಜದೊಂದಿಗೆ ಸಂಪರ್ಕಿಸುವುದು ನಮ್ಮ ಪ್ರಮುಖ ಗುರಿಯಾಗಿದೆ’’ ಎಂದು ಖ್ಯಾತ ಎಂಜಿನಿಯರ್, ಶಿಕ್ಷಣ ತಜ್ಞ ಮತ್ತು ಹಗುರ ಯುದ್ಧ ವಿಮಾನ (LCA) ತೇಜಸ್ ಯೋಜನೆಯ ಕಾರ್ಯಕ್ರಮ ನಿರ್ದೇಶಕ ಹಾಗೂ ಮುಖ್ಯ ವಿನ್ಯಾಸಕಾರ ಡಾ.ಕೋಟ ಹರಿನಾರಾಯಣ ತಿಳಿಸಿದರು.

ರಾಷ್ಟ್ರೀಯ ವಿಜ್ಞಾನ ದಿನದ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಸಂಶೋಧನೆಯ ಮೂಲಭೂತ ತತ್ತ್ವಕ್ಕೆ ಅನುಗುಣವಾಗಿ ಅತ್ಯುತ್ತಮ ಶಿಕ್ಷಣ ಮತ್ತು ಅಭಿವೃದ್ಧಿಗೆ ಪೂರಕವಾಗಿ ಬೆಂಗಳೂರಿನ ಗೀತಂ ಭಾಷಾಂತರ ಉಪಕ್ರಮಗಳ ಸಂಶೋಧನಾ ಕೇಂದ್ರದ ಬಹುಶಿಸ್ತೀಯ ಸಂಶೋಧನಾ ಕೇಂದ್ರವನ್ನು (Multidisciplinary Unit of Research on Translational Initiatives (MURTI) Research Centre) ಇಂದು ಉದ್ಘಾಟನೆ ಮಾಡಲಾಯಿತು. ಸದರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಅವರು
ಈ ಬಹುಶಿಸ್ತೀಯ ಸಂಶೋಧನಾ ಉಪಕ್ರಮವು ಆವಿಷ್ಕಾರಕ ಮತ್ತು ಅರ್ಥಪೂರ್ಣವಾದ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ಸಮಾನಮನಸ್ಕರ ಸಹಯೋಗವನ್ನು ಒಟ್ಟುಗೂಡಿಸಲು ನೆರವಾಗುತ್ತದೆ. ವಿವಿಧ ಕ್ಷೇತ್ರಗಳ ಸಂಶೋಧಕರನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಿ MURTI ಅನೇಕ ಸವಾಲುಗಳನ್ನು ಎದುರಿಸುವ ಸಲುವಾಗಿ ವಿವಿಧ ಹಿನ್ನೆಲೆಗಳ ಸಂಶೋಧಕರ ಸಾಮೂಹಿಕ ಪರಿಣತಿಯನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿದೆ.ಎಂಜಿನಿಯರಿಂಗ್ ಅನ್ನು ಮರು-ಎಂಜಿನಿಯರ್ ಅನ್ನಾಗಿ ರೂಪಿಸುವ ಅಗತ್ಯವಿದೆ. ಇದು ಮೂಲಭೂತ ಅಗತ್ಯತೆಯೂ ಆಗಿದೆ. ನಾವು ಇಂಧನವನ್ನು ಉತ್ಪಾದಿಸುವ ವಿಧಾನ ಮತ್ತು ಅದನ್ನು ಸಂಗ್ರಹಿಸುವ ವಿಧಾನ, ರವಾನಿಸುವ ವಿಧಾನ. ಹೀಗೆ ಎಲ್ಲವನ್ನೂ ಮರು-ನೋಡಬೇಕಾದ ಅಗತ್ಯವಿದೆ. ಕ್ರಿಸ್ಟೋಫರ್ ಡಬ್ಲ್ಯೂ ಹೋಡ್ಜಸ್ ಅವರ ಉಪಸ್ಥಿತಿಯು ಯುಎಸ್ ಅಕಾಡೆಮಿ, ಯುಎಸ್ ಉದ್ಯಮ, ಭಾರತೀಯ ಶಿಕ್ಷಣ, ಭಾರತೀಯ ಉದ್ಯಮ ಮತ್ತು ಸಾಮಾನ್ಯವಾಗಿ ಸಮಾಜದ ನಡುವಿನ ಬಲವಾದ ಸಹಯೋಗವನ್ನು ಖಚಿತಪಡಿಸುತ್ತದೆ ಎಂಬುದನ್ನು ನಾನು ನಂಬಿದ್ದೇನೆ’’ ಎಂದೂ ಅವರು ಹೇಳಿದರು.
ಈ ಉದ್ಘಾಟನಾ ಕಾರ್ಯಕ್ರಮದಲ್ಲಿ MURTI ಕೇಂದ್ರವು ಕೈಗೊಂಡಿರುವ ಸಂಶೋಧನಾ ಉಪಕ್ರಮಗಳ ವಿಶೇಷವಾದ ಒಳನೋಟಗಳನ್ನು ನೀಡಿತು. ಇಲ್ಲಿ ಪಾಲ್ಗೊಂಡಿದ್ದವರಿಗೆ ಅತ್ಯಾಧುನಿಕ ಸೌಲಭ್ಯಗಳನ್ನು ಪರಿಚಯಿಸಲಾಯಿತು ಮತ್ತು ಖ್ಯಾತನಾಮ ಅಧ್ಯಾಪಕರು ಮತ್ತು ಸಂಶೋಧಕರೊಂದಿಗೆ ಪರಸ್ಪರ ಚರ್ಚೆ ನಡೆಸಲು ಅವಕಾಶವನ್ನು ಕಲ್ಪಿಸಲಾಗಿತ್ತು.
ಚೆನ್ನೈನಲ್ಲಿ ಯುಎಸ್ ಕಾನ್ಸುಲ್ ಜನರಲ್ ಕ್ರಿಸ್ಟೋಫರ್ ಡಬ್ಲ್ಯೂ. ಹೋಡ್ಜಸ್ ಅವರು ಮಾತನಾಡಿ, “ MURTI ಸಂಸ್ಥೆಯು ನಾವೀನ್ಯತೆ ಮತ್ತು ಸಹಭಾಗಿತ್ವಕ್ಕಾಗಿ ನಮಗೆ ಅಗತ್ಯವಿರುವ ಸಂಯೋಜನೆ ಮತ್ತು ಕ್ರಿಯಾತ್ಮಕವಾದ ಸಂಶೋಧನೆಗೆ ಒಂದು ಮಾದರಿಯಾಗಿದೆ. ಇದು ನಮ್ಮ ಆರ್ಥಿಕತೆ ಮತ್ತು ಸಂಬಂಧವನ್ನು ವೃದ್ಧಿಸಲು ನೆರವಾಗುತ್ತದೆ’’ ಎಂದು ಅಭಿಪ್ರಾಯಪಟ್ಟರು.
ಗೀತಂನ ಬೆಂಗಳೂರು ಕ್ಯಾಂಪಸ್ ನ ಪ್ರೊವಿಸಿ ಪ್ರೊ.ಕೆ.ಎನ್.ಎಸ್.ಆಚಾರ್ಯ ಮಾತನಾಡಿ, “ಭಾರತದಲ್ಲಿನ ಶೈಕ್ಷಣಿಕ ಸಂಸ್ಥೆಗಳಿಗೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ಣಾಯಕ ಅಂಶಗಳಾಗಿವೆ. ಹೊಸತನವನ್ನು ಬೆಳೆಸುವ ನಿಟ್ಟಿನಲ್ಲಿ, ಜ್ಞಾನವನ್ನು ವೃದ್ಧಿ ಮಾಡುವಲ್ಲಿ ಮತ್ತು ಇತ್ತೀಚಿನ ಬೆಳವಣಿಗೆಗಳೊಂದಿಗೆ ಶೈಕ್ಷಣಿಕ ಪಠ್ಯಕ್ರಮಗಳು ಹಾಗೂ ಕಾರ್ಯಕ್ರಮಗಳನ್ನು ನವೀಕರಿಸುವ ನಿಟ್ಟಿನಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಇದು ನಿರ್ಣಾಯಕವೆನಿಸುವ ಸವಾಲುಗಳನ್ನು ಪರಿಹಾರ ಮಾಡುತ್ತದೆ. ಇದರ ಜೊತೆಗೆ ಉದ್ಯಮಶೀಲತೆಯನ್ನು ಉತ್ತೇಜಿಸುವುದು ಮತ್ತು ಉದ್ಯಮ, ಸಮಾಜದ ಶ್ರೇಯಸ್ಸಿಗೆ ಅಗತ್ಯವಾದ ಪರಿಹಾರಗಳನ್ನು ಒದಗಿಸುತ್ತದೆ. ವಿದ್ಯಾರ್ಥಿ-ಕೇಂದ್ರಿತ ಶಿಕ್ಷಣದ ದೃಷ್ಟಿಕೋನದಿಂದ ನೋಡಿದರೆ, MURTI ಉಪಕ್ರಮವು ವಿದ್ಯಾರ್ಥಿಗಳಿಗೆ ಕೇವಲ ಕಂಠಪಾಠ ಆಧಾರಿತ ಶಿಕ್ಷಣ ಪದ್ಧತಿಯನ್ನು ಮೀರಿ ಪ್ರಯೋಗಾಲಯದ ರಚನೆಗಳಲ್ಲಿ ನೈಜ ಪ್ರಪಂಚದ ಸಮಸ್ಯೆ ಪರಿಹಾರದ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಇದು ವಿಮರ್ಶಾತ್ಮಕವಾದ ಚಿಂತನೆ ಮತ್ತು ಪ್ರಾಯೋಗಿಕ ತಾರ್ಕಿಕ ಕೌಶಲ್ಯಗಳ ಬೆಳವಣಿಗೆಯನ್ನು ಉತ್ತೇಜಿಸುತ್ತಾ, ಪ್ರಯೋಗ ಪ್ರಕ್ರಿಯೆಯ ನೈಸರ್ಗಿಕ ಭಾಗವಾಗಿ ವೈಫಲ್ಯಗಳನ್ನೂ ಸ್ವೀಕರಿಸುವ ಮನಸ್ಥಿತಿಯನ್ನು ಪೋಷಣೆ ಮಾಡುತ್ತದೆ’’ ಎಂದು ತಿಳಿಸಿದರು.

ಉಪಕುಲಪತಿ ಪ್ರೊ.ದಯಾನಂದ ಸಿದ್ದವಟ್ಟಂ ಅವರು ಮಾತನಾಡಿ, “ಖ್ಯಾತನಾಮ ವಿದ್ವಾಂಸರು, ಯುವ ಸಂಶೋಧಕರು ಮತ್ತು ಉತ್ಸಾಹಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ಅಂತರಶಸ್ತೀಯ ಸಂಶೋಧನಾ ಸಂಸ್ಕೃತಿಯನ್ನು ರಚಿಸುವ ಗುರಿಯನ್ನು MURTI ಹೊಂದಿದೆ. ಸ್ಥಳೀಯ ವಿಷಯವನ್ನು ಬಳಸಿಕೊಂಡು ಜಾಗತಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇದು ಕೆಲಸ ಮಾಡಲಿದೆ. ವಿಶ್ವವಿದ್ಯಾನಿಲಯವು ಸಂಶೋಧನಾ ಮೂಲಸೌಕರ್ಯಗಳನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಮತ್ತು ದೇಶಾದ್ಯಂತ ಇರುವ ಯುವ, ಪ್ರತಿಭಾವಂತ ಸಂಶೋಧನಾ ವಿದ್ಯಾರ್ಥಿಗಳನ್ನು ಎಕ್ಸಲೆನ್ಸ್ ಫೆಲೋಗಳನ್ನಾಗಿ ನೇಮಕ ಮಾಡಿಕೊಳ್ಳಲು MURTI 100 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿದೆ. ಈ ಮೂಲಕ ಬೆಂಗಳೂರಿನ MURTI ಯನ್ನು ಜ್ಞಾನದ ಹಬ್ ಅನ್ನಾಗಿ ಮಾಡುವ ನಿಟ್ಟಿನಲ್ಲಿ MURTI ವಿಜ್ಞಾನ ಪಾರ್ಕ್ ಅನ್ನಾಗಿ ರೂಪಾಂತರಗೊಳಿಸಲು ಉದ್ದೇಶ ಹೊಂದಲಾಗಿದೆ. ಅಲ್ಲದೇ, ಈ ಪ್ರದೇಶದ ಸುಸ್ಥಿರ ಅಭಿವೃದ್ದಿ ನೆರವಾಗಲು ಅಗತ್ಯವಿರುವ ಜ್ಞಾನ ತಂತ್ರಜ್ಞಾನಗಳನ್ನು ತಯಾರು ಮಾಡುವ ಕೇಂದ್ರಬಿಂದುವಾಗಿದೆ. ಆಧುನಿಕ ಸಮಾಜಗಳ ಜಟಿಲವಾದ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ MURTI ಕೇಂದ್ರವು ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS), ಜವಾಹರಲಾಲ್ ನೆಹರೂ ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರೀಸರ್ಚ್ (NCAR) ಮತ್ತು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಯಂತಹ ವಿಶ್ವವಿಖ್ಯಾತ ಸಂಶೋಧನಾ ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ಸಹಭಾಗಿತ್ವವನ್ನು ಹೊಂದಲಿದೆ. ಅಲ್ಲದೇ, ಈ ದಿಸೆಯಲ್ಲಿ ಹೆಸರಾಂತ ಸಾಫ್ಟ್ ವೇರ್ ಮತ್ತು ಹಾರ್ಡ್ ವೇರ್ ಉದ್ಯಮಗಳ ನಾಯಕರೊಂದಿಗೂ ಸಹಭಾಗಿತ್ವವನ್ನು ಹೊಂದಲಿದೆ. ಈ ಕೇಂದ್ರವು ಬೆಂಗಳೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದೊಂದಿಗೆ ಸಹಭಾಗಿತ್ವ ಮಾಡಿಕೊಳ್ಳಲಿದ್ದು, ಬೆಳೆ ರಕ್ಷಣೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು, ಬೆಳೆ ನಿರ್ವಹಣೆ, ನೀರು ಸಂರಕ್ಷಣೆ ಮತ್ತು ಕೊಯ್ಲೋತ್ತರ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಎಐ-ಬೆಂಬಲಿತ ಕೃಷಿ ಪದ್ಧತಿಗಳನ್ನು ಅನುಸರಿಸಲು ಅಗತ್ಯವಾದ ಸಂಶೋಧನೆಗಳನ್ನು ಕೈಗೊಳ್ಳುವ ಕಾರ್ಯದಲ್ಲಿ ತೊಡಗಲಿದೆ’’ ಎಂದರು.
MURTI ಸಂಶೋಧನಾ ಕೇಂದ್ರದ ಉದ್ಘಾಟನೆಯು ಬಹುಶಿಸ್ತೀಯ ಸಹಯೋಗ ಮತ್ತು ಅತ್ಯಾದುನಿಕ ಸಂಶೋಧನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಂಸ್ಥೆಯ ಬದ್ದತೆಯನ್ನು ಸೂಚಿಸುತ್ತದೆ. ಮೂಲಭೂತ ವಿಜ್ಞಾನಗಳು, ಚಲನಶೀಲತೆಯ ತಂತ್ರಜ್ಞಾನಗಳು, ಪರಿಕರಗಳು ಮತ್ತು ಉತ್ಪಾದನೆ, ಸಂವಹನ ತಂತ್ರಜ್ಞಾನಗಳು, ಕೃಷಿ ತಂತ್ರಜ್ಞಾನಗಳು ಹಾಗೂ ಸಂವೇದಕ ತಂತ್ರಜ್ಞಾನಗಳನ್ನು ಒಳಗೊಂಡಿರುವ ಆರು ಪ್ರಮುಖ ಕ್ಷೇತ್ರಗಳೊಂದಿಗೆ ಜಾಗತಿಕ ಸವಾಲುಗಳನ್ನು ಎದುರಿಸಲು ಮತ್ತು ಹೊಸತನವನ್ನು ತರುವ ಗುರಿಯನ್ನು ಈ ಕೇಂದ್ರ ಹೊಂದಿದೆ. MURTI ಸಂಶೋಧನಾ ಕೇಂದ್ರವು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸುಸಜ್ಜಿತವಾದ 13 ಆಧುನಿಕ ಪ್ರಯೋಗಾಲಯಗಳನ್ನು ಹೊಂದಿದ್ದು, ಪ್ರಸಿದ್ಧ ಜಾಗತಿಕ ವಿಶ್ವವಿದ್ಯಾಲಯಗಳ ಅಧ್ಯಾಪಕರು ಮತ್ತು ಸಂಶೋಧಕರನ್ನು ಒಳಗೊಂಡಿರುವ ಹೆಮ್ಮೆಯ ಸಂಸ್ಥೆಯಾಗಿದೆ. ಡ್ರೋನ್ ತಂತ್ರಜ್ಞಾನದಿಂದ ಕ್ವಾಂಟಂ ಇನ್ಫೋಕಾಮ್ ವರೆಗೆ ಪ್ರತಿಯೊಂದು ಪ್ರಯೋಗಾಲಯವು ಜ್ಞಾನದ ಗಡಿಗಳನ್ನು ಮೀರಿ ಮತ್ತು ನೈಜ ಪ್ರಪಂಚದ ಪ್ರಭಾವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೂಪುಗೊಂಡಿದೆ.ಬೆಂಗಳೂರಿನ ಗೀತಂ ವಿಶ್ವದಾದ್ಯಂತ ಸಂಶೋಧಕರು, ನಾವೀನ್ಯಕಾರರು ಮತ್ತು ಸಹಯೋಗಿಗಳನ್ನು ಸ್ವಾಗತಿಸುತ್ತದೆ. ಬಹುಶಿಸ್ತೀಯ ಸಂಶೋಧನೆಯ ಶಕ್ತಿಯನ್ನು ಬಳಸಿಕೊಂಡು ಧನಾತ್ಮಕವಾದ ಬದಲಾವಣೆಯನ್ನು ಹೆಚ್ಚಿಸಲು ಮತ್ತು ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಸೃಷ್ಟಿಸುವ ನಮ್ಮ ಮಿಷನ್ ನಲ್ಲಿ ಕೈಜೋಡಿಸಲು ಕರೆ ನೀಡುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಹಗುರ ಯುದ್ಧ ವಿಮಾನ (LCA) ತೇಜಸ್ ಯೋಜನೆಯ ಕಾರ್ಯಕ್ರಮ ನಿರ್ದೇಶಕ ಮತ್ತು ಮುಖ್ಯ ವಿನ್ಯಾಸಕಾರ ಡಾ.ಕೋಟ ಹರಿನಾರಾಯಣ, ಚೆನ್ನೈನಲ್ಲಿ ಯುಎಸ್ ಕಾನ್ಸುಲೇಟ್ ನ ಕಾನ್ಸುಲ್ ಜನರಲ್ ಕ್ರಿಸ್ಟೋಫರ್ ಡಬ್ಲ್ಯೂ. ಹೋಡ್ಜಸ್, ಗೀತಂ ಕುಲಪತಿ ಡಾ.ವೀರೇಂದ್ರ ಸಿಂಗ್ ಚೌಹಾಣ್, ಉಪಕುಲಪತಿ ಪ್ರೊ. ದಯಾನಂದ ಸಿದ್ದವಟ್ಟಂ ಮತ್ತು ಬೆಂಗಳೂರು ಕ್ಯಾಂಪಸ್ ನ ಪ್ರೊ ವಿಸಿ ಪ್ರೊ.ಕೆಎನ್ಎಸ್ ಆಚಾರ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
