ದೊಡ್ಡಬಳ್ಳಾಪುರ : ಗುರುಗಳಾದ ಬಸವರಾಜುರವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾಶಿವರಾತ್ರಿ ಅಂಗವಾಗಿ ಪಾದಯಾತ್ರೆ ಮೂಲಕ ಸಾವಿರಾರು ಭಕ್ತದಿಗಳು ತೆರಳಿ ದೇವರ ದರ್ಶನ ಪಡೆಯಲಿದ್ದೇವೆ.ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಹ ಭಕ್ತಾದಿಗಳೊಂದಿಗೆ ಪಾದಯಾತ್ರೆ ಮಾಡುತ್ತಿದ್ದೇವೆ. ಎಂದು ತೂಬಗೆರೆ ವೆಂಕಟೇಶಪ್ಪ ( ಬಳೆ ಸ್ವಾಮಿ )ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ನಗರ ಭಾಗದ ಬಯಲು ಬಸವಣ್ಣ ದೇವಾಲಯದ ಬಳಿ ಶ್ರೀ ಪುಷ್ಪಾಂಡಜಾ ಗುರೂಜಿಯವರ ಶುಭ ಹಾರೈಕೆಯೊಂದಿಗೆ ಚಾಲನೆಗೊಂಡ ಪಾದಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದವರು ಕಳೆದ 9 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾಶಿವರಾತ್ರಿ ಅಂಗವಾಗಿ ನಡೆಯುವ ಪಾದಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ. ನೂರಾರು ಭಕ್ತರು ಮಳೆ ಗಾಳಿ ಬಿಸಿಲನ್ನು ಲೆಕ್ಕಿಸದೆ ಪಾದಯಾತ್ರೆಗೆ ಮುಂದಾಗಿರುವುದು ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ತಿಳಿಸಿದರು

ಪಾದಯಾತ್ರೆಯ ಆಯೋಜಕರಾದ ಬಸವರಾಜು ಮಾತನಾಡಿ ಕಳೆದ 27 ವರ್ಷಗಳಿಂದ ಸತತವಾಗಿ ಧರ್ಮಸ್ಥಳ ಶ್ರೀ ಮಂಜುನಾಥರ ದರ್ಶನಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದೇವೆ. ಹಗಲು ರಾತ್ರಿ ಎನ್ನದೆ ಭಕ್ತಾದಿಗಳು ನಮ್ಮೊಂದಿಗೆ ಕೈಜೋಡಿಸಿ ಸತತವಾಗಿ ನಡೆದು ದೇವರ ದರ್ಶನ ಪಡೆಯುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ದೊಡ್ಡಬಳ್ಳಾಪುರದಿಂದ ನೆಲಮಂಗಲ ಮಾರ್ಗವಾಗಿ ಚಲಿಸುವ ನಮ್ಮ ತಂಡಕ್ಕೆ ನೂರಾರು ಮಂದಿ ಸಹಕಾರ ನೀಡಿ ನಮ್ಮೊಂದಿಗೆ ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಾದಯಾತ್ರೆ ಸಂಕಲ್ಪಕ್ಕೆ ವರ್ಷದಿಂದ ವರ್ಷಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ವೆಂಕಟೇಶಪ್ಪ ತೂಬಗೆರೆ (ದೇವೇಗೌಡರು ಬಳೆ ಸ್ವಾಮಿ), ಬಸವರಾಜ್ ಸ್ವಾಮಿ. ಈರಣ್ಣ. ಗುರುಮೂರ್ತಿ. ರಮೇಶ್. ರಾಮಾಂಜಿನಪ್ಪ. ಸಂತೋಷ್ ಸೇರಿದಂತೆ ಹಲವು ಭಕ್ತಾದಿಗಳು ಉಪಸ್ಥಿತರಿದ್ದರು
