
ದೊಡ್ಡಬಳ್ಳಾಪುರ : ತಾಲ್ಲೂಕಿನ ನಾಗದೇನಹಳ್ಳಿ ಸಮೀಪದ ಗೀತಮ್ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಆಂಧ್ರ ಮೂಲದ ವಿದ್ಯಾರ್ಥಿ ದಾಸರಿ ಬ್ರಹ್ಮಾ ಸಾಯಿ ರೆಡ್ಡಿ(19) ಮೃತಪಟ್ಟ ದುರ್ದೇವಿ ಸ್ಥಳೀಯ ಪ್ರತಿಷ್ಠಿತ ಗೀತಮ್ ಕಾಲೇಜಿನಲ್ಲಿ ಬಿ.ಟೆಕ್ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದು. ಈ ಕುರಿತು ಸೂಕ್ತ ತನಿಖೆ ಆಗಬೇಕಿದೆ ಎಂದು ಸ್ಥಳೀಯರು ಅಗ್ರಹಿಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳ ಮೊಬೈಲ್ ನಲ್ಲಿ ವಿದ್ಯಾರ್ಥಿ ದಾಸರಿ ಬ್ರಹ್ಮಾ ಸಾಯಿ ರೆಡ್ಡಿಯ ಮೃತ ದೇಹವನ್ನು ಕೊಂಡೊಯ್ಯುತ್ತಿರುವ ದೃಶ್ಯಾವಳಿಗಳು ಸೆರೆಯಾಗಿದ್ದು. ಯಾವ ಕಾರಣದಿಂದಾಗಿ ವಿದ್ಯಾರ್ಥಿ ಮೃತ ಪಟ್ಟಿದ್ದಾನೆ ಎಂಬುದು ತನಿಖೆ ಮೂಲಕ ಹೊರಬಿಳಬೇಕಿದೆ.