ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ : ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ ಡಾ.ಕೆ.ಸುಧಾಕರ್

Spread the love

ದೊಡ್ಡಬಳ್ಳಾಪುರ ಮಾ.26 ( ವಿಜಯಮಿತ್ರ ) :    ಭಾರತೀಯ ಜನತಾ ಪಾರ್ಟಿ ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಲಾಗಿದ್ದು ಈ ಹಿನ್ನಲೆ ತಾಲೂಕಿನ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದೇನೆ ಎಂದು ಮಾಜಿ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು

 

ಮಂಗಳವಾರ   ದೊಡ್ಡಬಳ್ಳಾಪುರ ತಾಲ್ಲೂಕು ಬಿಜೆಪಿ ಕೇಂದ್ರ ಕಚೇರಿಯಲ್ಲಿ ನೆಡೆದ ಕಾರ್ಯಕರ್ತರ ಸಭೆಯ ನಂತರ ಮಾತನಾಡಿದ ಅವರು ಕೆಲ ಕಾರ್ಯಕರ್ತರು ಮುಖಂಡರಲ್ಲಿ ಒಂದಿಷ್ಟು ಗೊಂದಲ ಇದ್ದು. ಸರ್ವ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಸ್ಥಳೀಯ ಶಾಸಕರ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಬೆಂಬಲದೊಂದಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಬಹುಮತಗಳಿಂದ ವಿಜಯ ಸಾಧಿಸುವುದು ಖಂಡಿತ ಎಂದು ತಿಳಿಸಿದರು.

 

 

ಮಾಜಿ ಸಚಿವರ ಮೇಲೆ ಕಾರ್ಯಕರ್ತರ ಆಕ್ರೋಶ

ಕಾರ್ಯಕರ್ತ ಸಭೆಯಲ್ಲಿ ಕೆಲ ಮುಖಂಡರು ಮಾಜಿ ಸಚಿವ ಡಾಕ್ಟರ್ ಕೆ ಸುಧಾಕರ್ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದರು ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಬಿಜೆಪಿ ಪಕ್ಷವು ಒಂದು ಕುಟುಂಬ, ಪಕ್ಷದ ಕಾರ್ಯಕರ್ತರು ಒಟ್ಟಾಗಿ ಸಭೆ ಸೇರಿದ್ದೇವೆ. ಇಂತಹ ಸಂದರ್ಭಗಳಲ್ಲಿ ಕುಂದು ಕೊರತೆಗಳ ಬಗ್ಗೆ ಮುಖಂಡರು ಅಥವಾ ಕಾರ್ಯಕರ್ತರು ಅಹವಾಲು ಸಲ್ಲಿಸುವುದು ಸರ್ವೇಸಾಮಾನ್ಯವಾಗಿರುತ್ತದೆ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ ಸ್ಥಳೀಯ ಶಾಸಕರ ಬೆಂಬಲ ಕಾರ್ಯಕರ್ತರ ಶ್ರಮದ ವಿಶ್ವಾಸವಿದೆ. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ ಎಂದರು

 

 

ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಧೀರಜ್ ಮುನಿರಾಜು ಮಾತನಾಡಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ, ಸಾವಿರಾರು ಕಾರ್ಯಕರ್ತರಲ್ಲಿ ಕೆಲ ಕುಂದುಕೊರತೆಗಳು ಇರುವುದು ಸಹಜ. ಕಾರ್ಯಕರ್ತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಕೇಂದ್ರದ ವರಿಷ್ಠರು ಹಾಗೂ ರಾಜ್ಯ ನಾಯಕರು ಸೂಚಿಸಿರುವ ಅಭ್ಯರ್ಥಿಯ ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗಾಗಿ ಸರ್ವರೂ ಒಮ್ಮತದ ಶ್ರಮಿಸಲಿದ್ದೇವೆ ಅತ್ಯಧಿಕ ಮತಗಳ ಅಂತರದಿಂದ ಡಾಕ್ಟರ್ ಕೆ ಸುಧಾಕರ್ ಅವರನ್ನು ಲೋಕಸಭಾ ಸದಸ್ಯರಾಗಿ ಆಯ್ಕೆ ಮಾಡುವುದೇ ನಮ್ಮ ಮುಖ್ಯ ಉದ್ದೇಶ ಎಂದರು

 

 

ಈ ಸಂದರ್ಭದಲ್ಲಿ ಸ್ಥಳೀಯ ಪಕ್ಷದ ಜಿಲ್ಲಾಧ್ಯಕ್ಷರಾದ ರಾಮಕೃಷ್ಣಯ್ಯ, ತಾಲೂಕು ಅಧ್ಯಕ್ಷರಾದ ನಾಗೇಶ್, ಮುಖಂಡರಾದ ಪುಷ್ಪ ಶಂಕರ್, ಬಂತಿ ವೆಂಕಟೇಶ್, ವಾಣಿ ನಂದಕುಮಾರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಮುಖಂಡರು ಉಪಸ್ಥಿರಿದ್ದರು.

Leave a Reply

Your email address will not be published. Required fields are marked *