ದೊಡ್ಡಬಳ್ಳಾಪುರ ಮಾ.28 : ಸತತ ಏಳು ಭಾರಿ ಜನರ ಪ್ರೀತಿ ಹಾಗೂ ವಿಶ್ವಾಸದಿಂದ ಗೆಲುವು ಸಾಧಿಸಿರುವ ಕೆ ಎಚ್ ಮುನಿಯಪ್ಪ ರವರನ್ನು ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ನಾಸೀರ್ ಅಹಮದ್ ಈ ಕೂಡಲೇ ಸಾರ್ವಜನಿವಾಗಿ ಕ್ಷಮೆಯಾಚಿಸಬೇಕಿದೆ ಎಂದು ಮಾದಿಗ ಸಮುದಾಯ ಮುಖಂಡರಾದ ರಾಮಕೃಷ್ಣಪ್ಪ ತಿಳಿಸಿದರು.

ನಗರದ ಪ್ರವಾಸಿ ಮಂದಿರ ವೃತ್ತದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಸಚಿವರಾದ ಕೆ.ಹೆಚ್.ಮುನಿಯಪ್ಪರವರ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ ನಾಸೀರ್ ಸಾಬ್ ಮತ್ತು ಕೋಲಾರ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಷಡ್ಯಂತ್ರ ನಡೆಸುತ್ತಿರುವರ ಶಾಸಕರ ವಿರುದ್ಧ ಕೆ ಎಚ್ ಮುನಿಯಪ್ಪ ಅಭಿಮಾನಿಗಳು ಮತ್ತು ಮಾದಿಗ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು. ಕೆ.ಹೆಚ್. ಮುನಿಯಪ್ಪ 7 ಬಾರಿ ಸಂಸದರಿಗೆ ಅಯ್ಕೆಯಾದವರು, 10 ವರ್ಷಗಳ ಕಾಲ ಕೇಂದ್ರ ಸಚಿವರಾಗಿ ಕೆಲಸ ಮಾಡಿರುವ ರಾಜಕೀಯ ಮುತ್ಸದಿ ಅವರು, ಅವರ ವಿರುದ್ಧ ವಿಧಾನ ಪರಿಷತ್ ಸದಸ್ಯ ನಾಸೀರ್ ಅಹಮದ್ ಕೀಳು ಅಭಿರುಚಿಯನ್ನು ವ್ಯಕ್ತಪಡಿಸಿದ್ದಾರೆ, ಇದು ಮಾದಿಗ ಸಮುದಾಯಕ್ಕೆ ಮಾಡಿದ ಅವಮಾನ , ಅವರು ಎಂದು ದ್ವೇಷ ರಾಜಕಾರಣ ಮಾಡಿಲ್ಲ ಎಲ್ಲರ ಮನಸ್ಸು ಗೆದ್ದಿದ್ದಾರೆ ಎಂದರು.
ಕೋಲಾರದಲ್ಲಿ ಷಡಂತ್ರ ನಡೆಸಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದವರು ಇಂದು ಅವರ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ , ಅವರ ವಿರುದ್ಧದ ಷಡ್ಯಂತ್ರ ಸತ್ಯ ಶೋಧನ ಸಮಿತಿಯಿಂದ ಬಹಿರಂಗವಾಗಿದೆ, ದೆಹಲಿ ಹೈಕಮಾಂಡ್ ಚಿಕ್ಕಪೆದ್ದಣ್ಣನವರಿಗೆ ಟಿಕೆಟ್ ಫೈನಲ್ ಮಾಡಿತ್ತು, ಇದರಿಂದ ಬೇಸತ್ತು ಹೇಳಿಕೆ ಈ ನೀಡಿದ್ದಾರೆ, ತಕ್ಷಣವೇ ಅವರನ್ನು ವಜಾ ಮಾಡಬೇಕು, ಆಗ್ರಹಿಸಿದರು.
ವಕೀಲರಾದ ಆರ್.ವಿ.ಮಹೇಶ್ ಮಾತನಾಡಿ ಮೃದು ಸ್ವಭಾವದ ಕೆ ಎಚ್ ಮುನಿಯಪ್ಪ ಕುರಿತು ನಸೀರ್ ಅಹಮದ್ ರವರ ಹೇಳಿಕೆ ಸಲ್ಲದು, ಈ ಕೂಡಲೇ ಬಹಿರಂಗವಾಗಿ ಕ್ಷಮೆ ಕೇಳಬೇಕು ಹಾಗೂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಈ ಕೂಡಲೇ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಜಾಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಮ್ಮ ಆಕ್ರೋಶ ವ್ಯಕ್ತಿಪಡಿಸಿದರು

ಈ ಕುರಿತು ಸ್ಥಳೀಯ ತಾಲ್ಲೂಕು ದಂಡಧಿಕಾರಿಗಳಿಗೆ ದಲಿತ ಸಂಘಟನೆಗಳ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಅಂಜನ್ ಮೂರ್ತಿ, ರಾಮು, ನರೇಂದ್ರ ಮೂರ್ತಿ, ರಮೇಶ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
