ದೊಡ್ಡಬಳ್ಳಾಪುರ ಮಾ.29( ವಿಜಯ ಮಿತ್ರ ) : ಜನವರಿ 1 ರಂದು ಆಯೋಜನೆ ಮಾಡಲಾಗಿರುವ ಸಮ್ಮಿಲನ ಸಭೆಯಲ್ಲಿ ಎನ್ ಡಿ ಎ ಅಭ್ಯರ್ಥಿ ಡಾ. ಕೆ. ಸುಧಾಕರ್ ಜೊತೆಯಾಗಿ ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕರ್ತರಿಗೆ ಶಕ್ತಿ ತುಂಬಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ ಮುನೇಗೌಡ ತಿಳಿಸಿದರು.

ನಗರದ ಜೆಡಿಎಸ್ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಜೆಡಿಎಸ್ ಪಕ್ಷವು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎನ್. ಡಿ. ಎ ಗೆ ಬೆಂಬಲ ಸೂಚಿಸಿದ್ದು. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಹಾಗೂ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆದೇಶದಂತೆ ಈ ಬಾರಿ ನಮ್ಮ ಬೆಂಬಲವನ್ನು ಎನ್ ಡಿ ಎ ಅಭ್ಯರ್ಥಿಯಾದ ಡಾಕ್ಟರ್ ಕೆ ಸುಧಾಕರ್ ಅವರಿಗೆ ಸೂಚಿಸಿದ್ದೇವೆ. ಈ ಹಿನ್ನಲೆ ಎಲ್ಲಾ ತಾಲ್ಲೂಕಿನ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಹೊಸ ಉತ್ಸಹ, ಶಕ್ತಿ ತುಂಬಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹಲವು ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಏಪ್ರಿಲ್ 1ರಂದು ಬೆಳಗ್ಗೆ 11 ಗಂಟೆಗೆ ದೇವನಹಳ್ಳಿ, ಮಧ್ಯಾಹ್ನ 2 ಗಂಟೆ ದೊಡ್ಡಬಳ್ಳಾಪುರ ತಾಲ್ಲೂಕಿನ ಒಕ್ಕಲಿಗರ ಭವನ , ಸಂಜೆ 4 ಗಂಟೆಗೆ ನೆಲಮಂಗಲದಲ್ಲಿ ಸಮ್ಮಿಲನ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಗಳ ಮುಖಂಡರು ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಡ್ಡರಹಳ್ಳಿ ರವಿ ಮಾತನಾಡಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮನಗಂಡು ನಮ್ಮ ರಾಷ್ಟ್ರೀಯ ನಾಯಕರಾದ ಎಚ್ ಡಿ ದೇವೇಗೌಡ ಅವರು ಎನ್ ಡಿ ಎ ಜೊತೆ ಮೈತ್ರಿ ಮಾಡಿಕೊಂಡಿದ್ದು. ಈ ಹಿನ್ನಲೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್ ಬೆಂಬಲಿಸಿ ಏಪ್ರಿಲ್ 1ಜಿಲ್ಲೆಯ ವರಿಷ್ಟರು ಹಾಗೂ ಮುಖಂಡರ ಸಮ್ಮತಿಯ ಮೇರೆಗೆ ಸಮ್ಮಿಲನ ಸಭೆ ಏರ್ಪಡಿಸಿದ್ದು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು, ತಾಲ್ಲೂಕಿನ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿಮಾಡಿದರು.

ಸುದ್ದಿಗೊಷ್ಟಿಯಲ್ಲಿ ಜೆಡಿಎಸ್ ಮುಖಂಡರಾದ ಲಕ್ಷ್ಮೀಪತಯ್ಯ, ಶಾಂತಮ್ಮ, ದೇವರಾಜಮ್ಮ, ಮಂಜುನಾಥ್ , ರಂಗಸ್ವಾಮಿ, ಸಿದ್ದಪ್ಪ, ಕೆಂಪೇಗೌಡ, ಜಗನ್ನಾಥ್ ಚಾರ್, ನರಸಿಂಹಗೌಡ, ಅಶ್ವಥ್ಧನಾರಾಯಣ್, ನರಸಿಂಹಮೂರ್ತಿ, ನಟರಾಜ್, ಶ್ರೀನಿವಾಸ್. ಶಶಿಕಲಾ. ಜ್ಯೋತಿ, ಶಾರದಾ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
