
ದೊಡ್ಡಬಳ್ಳಾಪುರ ಏಪ್ರಿಲ್ 09 ( ವಿಜಯಮಿತ್ರ) : ಚಿಕ್ಕಬಳ್ಳಾಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೀ ರಕ್ಷಾ ರಾಮಯ್ಯ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಯುಗಾದಿ ಹಬ್ಬದ ಹಿನ್ನಲೆ ತಾಲ್ಲೂಕಿನ ಪ್ರಸಿದ್ಧ ದೇವಾಲಯ ಘಾಟಿ ಸುಬ್ರಮಣ್ಯಕ್ಕೆ ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ.ಈ ಯುಗಾದಿ ಹಬ್ಬವು ಎಲ್ಲರ ಜೀವನದಲ್ಲಿ ಹೊಸ ಚೈತನ್ಯ ತುಂಬಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು.
ಸ್ಥಳೀಯ ಮುಖಂಡರಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ರಂಗಪ್ಪ , ಪ್ರಚಾರ ಸಮಿತಿ ಅಧ್ಯಕ್ಷರು ಮೆಳೇಕೋಟೆ ಅಂಜಿನಪ್ಪ ಮತ್ತು ತೂಬಗೆರೆ ಕಾಂಗ್ರೆಸ್ ಯುವ ಮುಖಂಡ ನವೀನ್ ಹಾಗೂ ಮತ್ತಿತರು ಉಪಸ್ಥಿತರಿದ್ದರು.