*ಹಿರಿಯ ನಟ ದ್ವಾರಕೀಶ್ ನಿಧನ : ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಂದ ಸಂತಾಪ*

Spread the love

ಕರ್ನಾಟಕ ಏಪ್ರಿಲ್ 16 (ವಿಜಯಮಿತ್ರ ) : ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ( 81) ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಎದ್ದು, ಕಾಫಿ ಕುಡಿದವರು ನಂತರ ಉಸಿರು ಚೆಲ್ಲಿದ್ದಾರೆ. ಅಗಲಿದ ಹಿರಿಯ ನಟನಿಗೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.

 

 

ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.

ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು.

 

ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಕಂಬನಿ ಮಿಡಿದಿದ್ದಾರೆ

 

ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ.ವರನಟ ಡಾ.ರಾಜ್‌ಕುಮಾರ್‌, ಡಾ.ವಿಷ್ಣುವರ್ಧನ್‌, ಶ್ರೀ ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಅಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ.

 

 

ಕನ್ನಡ ಚಿತ್ರರಂಗದ ಮೇರು ನಟ, ನಿರ್ದೇಶಕ ಹಾಗೂ ಹಿರಿಯ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾಗಿರುವ ವಿಷಯ ತಿಳಿದು ತುಂಬಾ ದಃಖಿತನಾಗಿದ್ದೇನೆ‌. ಅವರ ಅಗಲಿಕೆಯಿಂದ ಕನ್ನಡ ಕಲಾಕ್ಷೇತ್ರ ಬಡವಾದಂತಾಗಿದೆ. ದ್ವಾರಕೀಶ್ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ‌ನು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬಿನಿ ಮಿಡಿದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ.

 

 

 

 

ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ ಹಿರಿಯ ಕಲಾಚೇತನಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ, ಆಪ್ತೇಷ್ಟರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ದಯಪಾಲಿಸಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.

Leave a Reply

Your email address will not be published. Required fields are marked *