ಪೆನ್ ಡ್ರೈವ್ ಪ್ರಕರಣ *: ಮೇ 13ರಕ್ಕೆ ಕೆ ಆರ್ ಎಸ್ ಪಕ್ಷದ ವತಿಯಿಂದ ಹಾಸನ ಚಲೋ ಕಾರ್ಯಕ್ರಮ*

Spread the love

ದೊಡ್ಡಬಳ್ಳಾಪುರ ಮೇ 11 ( ವಿಜಯಮಿತ್ರ ) :ಹಾಸನದ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬುವ ಸಲುವಾಗಿ ಮೇ 13 ರಂದು ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ‘ ಹಾಸನ ಚಲೋ ‘ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶಿವಶಂಕರ್ ತಿಳಿಸಿದರು.

 

 

ತಪ್ಪು ಗೊತ್ತಿದ್ದರೂ ಟಿಕೆಟ್ ಕೊಟ್ಟ ಕೇಂದ್ರ ಬಿಜೆಪಿ ಸರ್ಕಾರ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕುರಿತು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಇದ್ದರೂ 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿಯಾಗಿ ಟಿಕೆಟ್ ನೀಡಿದೆ. ಆದರೆ ಪ್ರಕರಣ ಹೊರ ಬರುತ್ತಿದ್ದಂತೆ ತಮಗೂ ಪ್ರಜ್ವಲ್ ರೇವಣ್ಣರಿಗೂ ಸಂಬಂಧವೇ ಇಲ್ಲ ಎಂಬ ರೀತಿಯಲ್ಲಿ ಬಿಜೆಪಿ ವರ್ತಿಸುತ್ತಿದೆ ಎಂದು ಆರೋಪಿಸಿದರು.

 

ನಗರದ ಕರ್ನಾಟಕ ರಾಷ್ಟ್ರ ಸಮಿತಿ ಕಚೇರಿಯಲ್ಲಿ ಶನಿವಾರ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಹಲವಾರು ದಿನಗಳಿಂದ ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣ ಬಾರಿ ಚರ್ಚೆಗೆ ಗುರಿಯಾಗಿದ್ದು. ಈ ಕುರಿತು ರಾಜಕೀಯ ಪಕ್ಷಗಳು ಒಬ್ಬರ ಮೇಲೆ ಮತ್ತೊಬ್ಬರು ಆರೋಪಿಸಿಕೊಳ್ಳುತ್ತಿದ್ದಾರೆ ಏನೇ ಆದರೂ ಈ ಪ್ರಕರಣ ಸಾವಿರಾರು ಹೆಣ್ಣು ಮಕ್ಕಳ ಜೀವ ಹಾಗೂ ಜೀವನದ ವಿಷಯವಾಗಿದ್ದು. ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ, ರಾಜ್ಯ ಸರ್ಕಾರ ನೇಮಿಸಿರುವ ಎಸ್ ಐ ಟಿ ತನಿಖಾತಂಡ ಈಗಾಗಲೇ ವಿಚಾರಣೆ ಕೈಗೆತ್ತಿಕೊಂಡಿದ್ದು . ಸತ್ಯ ಸತ್ಯತೆ ಹೊರ ಬಿಡಬೇಕಿದೆ, ತಪ್ಪು ಮಾಡಿ ತಲೆ ಮರೆಸಿಕೊಂಡಿರುವ aರಾಜಕಾರಣಿಯನ್ನು ಕೂಡಲೇ ಕಾನೂನು ಕ್ರಮಕ್ಕೆ ಒಳಪಡಿಸಬೇಕಿದೆ ಈ ಮೂಲಕ ದೇಶದ ಜನಸಾಮಾನ್ಯರಿಗೆ ಕಾನೂನಿನ ಬಗ್ಗೆ ಉತ್ತಮ ಭಾವನೆ ಹಾಗೂ ಅಚಲನಂಬಿಕೆ ಮೂಡಿಸಬೇಕಾದ ಅವಶ್ಯಕತೆ ಇದೆ ಎಂದರು.ಹಾಸನದ ಹೆಣ್ಣು ಮಕ್ಕಳ ರಕ್ಷಣೆಗಾಗಿ ಅವರ ಬೆಂಬಲವಾಗಿ ನಿಲ್ಲಲು ಕೆ ಆರ್ ಎಸ್ ಪಕ್ಷವು ಮೇ 13 ರಂದು ರಾಜ್ಯಮಟ್ಟದಲ್ಲಿ ಹಾಸನ ಚಲೋ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಹಿತೈಷಿಗಳು ಸ್ನೇಹಿತರು ಭಾಗವಹಿಸಲಿದ್ದಾರೆ ಎಂದರು

 

ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ

 

ಪ್ರಜ್ವಲ್ ರೇವಣ್ಣ ಕುರಿತಾದ ಪೆನ್ ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಎಸ್ಐಟಿ ತನಿಖಾತಂಡದಿಂದ ಬಿಡುಗಡೆಗೊಳಿಸಿ ಕೇಂದ್ರದ ಸಿಬಿಐ ವಿಶೇಷ ತಂಡಕ್ಕೆ ಒಪ್ಪಿಸಬೇಕೆಂದು ಆಗ್ರಹಿಸಿದರು.ತನಿಖಾ ಸಂಸ್ಥೆಗಳು ನಿಷ್ಠೆಯಿಂದ ಶ್ರಮಿಸುತ್ತವೆ ಆದರೆ ಅಧಿಕಾರದಲ್ಲಿರುವ ಪಕ್ಷಗಳು ಹಾಗೂ ರಾಜಕಾರಣಿಗಳು ತನಿಖಾ ಸಂಸ್ಥೆಗಳು ನೀಡಿರುವ ಮಾಹಿತಿ ಮರೆಮಾಚುತ್ತವೆ ಎಂದು ಆರೋಪಿಸಿದರು

ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಎಲ್.ಎನ್‌.ಆನಂದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಮಾರುತಿ, ತಾಲ್ಲೂಕು ರೈತ ಘಟಕದ ಅಧ್ಯಕ್ಷ ವಿಜಯಕುಮಾರ್ ತಾ. ಚಾಲಕರ ಘಟಕದ ಅಧ್ಯಕ್ಷ ವಿಜಯಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *