*ದೊಡ್ಡಬಳ್ಳಾಪುರ: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ಮೌಲ್ಯದ ರಾಗಿ ಹುಲ್ಲು ಬೆಂಕಿಗಾಹುತಿ*

Spread the love

ದೊಡ್ಡಬಳ್ಳಾಪುರ ಮೇ 18 ( ವಿಜಯಮಿತ್ರ ) : ಬೆಂಕಿ ತಗುಲಿದ ಪರಿಣಾಮ ಒಂದು ಲಕ್ಷಕ್ಕಿಂತಲೂ ಅಧಿಕ ಮೌಲ್ಯದ ರಾಗಿ ಹುಲ್ಲು ಸುಟ್ಟು ಭಸ್ಮವಾಗಿರುವ ಘಟನೆ ದೊಡ್ಡಬೆಳವಂಗಲ ಹೋಬಳಿಯ ಕಾಡತಿಪ್ಪುರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವೆಂಕಟಪ್ಪ ಎಂಬುವರ ರಾಗಿ ಹುಲ್ಲಿನ ಬಣವೆಗೆ ಶನಿವಾರ ಬೆಳಿಗ್ಗೆ ಬೆಂಕಿ ತಗುಲಿದೆ. ಬೆಂಕಿಯನ್ನು ನಂದಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದು.

ಬೆಂಕಿ ನಂದಿಸುವಷ್ಟರಲ್ಲಿ ರಾಗಿ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು.ಇದರಿಂದ ಸುಮಾರು 1 ಲಕ್ಷ ಮೌಲ್ಯಕ್ಕಿಂತಲೂ ಅಧಿಕ ರಾಗಿ ಹುಲ್ಲು ಬೆಂಕಿಗಾಹುತಿಯಾಗಿ ನಷ್ಟ ಸಂಭವಿಸಿದೆ.

ಈ ಘಟನೆಗೆ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

© 2026 Malnad TV. All Rights Reserved.