
ರಾಜಘಟ್ಟ ಗ್ರಾಮ ಪಂಚಾಯತಿ ಸದಸ್ಯ ಎ. ಶಿವಕುಮಾರ್ ತಮ್ಮ ಹುಟ್ಟುಹಬ್ಬವನ್ನು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ.
ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣು, ಬ್ರೆಡ್, ಬಿಸ್ಕೆಟ್ ಸೇರಿದಂತೆ ಹಲವು ಪೌಷ್ಟಿಕ ಪದಾರ್ಥಗಳನ್ನು ಒಳಗೊಂಡ ಕಿಟ್ ಗಳನ್ನು ತಮ್ಮ ಸ್ನೇಹಿತರೊಂದಿಗೆ ವಿತರಿಸುವ ಮೂಲಕ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ನನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆಗೂಡಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಹಾಗೂ ಅನಾಥಾಶ್ರಮದ ಮಕ್ಕಳಿಗೆ ಸಿಹಿತಿನಿಸು ಹಂಚುವ ಮೂಲಕ ಆಚರಿಸಿಕೊಳ್ಳುತ್ತಿದ್ದೇನೆ ದುಂದು ವೆಚ್ಚದ ಆಚರಣೆ ಮಾಡುವ ಬದಲು ಬಡರೋಗಿಗಳಿಗೆ ಕೈಲಾದ ಸಹಾಯ ಮಾಡುವುದು ಉತ್ತಮ ಎಂಬುದು ನನ್ನ ಭಾವನೆ ಹಾಗಾಗಿ ನನ್ನ ಕೈಲಾದ ಸೇವೆ ಮಾಡುತ್ತಿದ್ದೇನೆ ಎಂದರು.
ರಾಜಘಟ್ಟ ಗ್ರಾಮದ ಮುಖಂಡ ಹರೀಶ್ ಮಾತನಾಡಿ ಗ್ರಾಮದ ಒಳಿತಿಗಾಗಿ ಸದಾ ಶ್ರಮಿಸುವ ಸಹೃದಯಿ, ಗೆಳೆಯ ಶಿವಕುಮಾರ್ ರವರಿಗೆ ಶುಭವಾಗಲಿ. ಸದಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಅವರು ಮುಂದಿನ ದಿನಗಳಲ್ಲಿ ಸಮಾಜಕ್ಕೆ ಮತ್ತಷ್ಟು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿಪಂಚಾಯಿತಿ ಸದಸ್ಯ ಬಿ ಎಸ್ ಹರೀಶ್ , ಮಾಜಿ ಅಧ್ಯಕ್ಷ ಆರ್ ಸಿ ಶಿವಕುಮಾರ್, ಆರ್ ಜಿ ಚಂದ್ರಶೇಖರ್, ಡಿ ಎಲ್ ಬಿ ಮಂಜುನಾಥ್, ಮುತ್ತುರಾಜ್, ಯಶವಂತ್. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.