*ಕ್ಷೇತ್ರದ ಪದವೀಧರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ, ಈ ಬಾರಿ ಗೆಲ್ಲುವ ಭರವಸೆ ಇದೆ – ಉದಯ್ ಸಿಂಗ್*

Spread the love

ದೊಡ್ಡಬಳ್ಳಾಪುರ ಮೇ 20 ( ವಿಜಯಮಿತ್ರ) : ಹಲವಾರು ವರ್ಷಗಳು ನಾವು ಪದವೀಧರರ ಪ್ರತಿನಿಧಿಗಳು ಎಂದು ಸುಳ್ಳು ಹೇಳುವ ಮೂಲಕ ಪದವೀಧರರ ಕಷ್ಟ ಸಮಯದಲ್ಲಿ ಸಹಾಯಕ್ಕೆ ಬಾರದ ಜನಪ್ರತಿನಿಧಿಗಳ ವಿರುದ್ಧದ ಹೋರಾಟ ನನ್ನದಾಗಿದ್ದು. ಪದವೀಧರರ ಧ್ವನಿಯಾಗಿ ಶ್ರಮಿಸಲು ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ ಉದಯ್ ಸಿಂಗ್ ತಿಳಿಸಿದರು.

ವಿಧಾನಪರಿಷತ್ ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹತ್ತಾರು ವರ್ಷಗಳಿಂದ ಅಧಿಕಾರದಲ್ಲಿದ್ದು ಸಹ ಪದವೀಧರರ ಕಷ್ಟಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳನ್ನು ನೋಡಿರುವ ಪದವೀಧರರು ಈ ಬಾರಿ ಉತ್ತಮ ವ್ಯಕ್ತಿಯ ಆಯ್ಕೆಗೆ ಮುಂದಾಗಿದ್ದಾರೆ. ಎಲ್ಲೆಡೆ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದ್ದು. ಪದವೀಧರರ ಧ್ವನಿಯಾಗಿ ಸರ್ಕಾರಕ್ಕೆ ಪದವೀಧರರ ಕಷ್ಟಗಳ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಶ್ರದ್ಧೆಯಿಂದ ಮಾಡಲು ಈ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ.

ಚುನಾವಣೆಯಲ್ಲಿ ಗೆಲುವು ಸಾಧಿಸಲು ಪದವೀಧರ ಮತದಾರರಿಗೆ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಹಲವು ಬಗೆಯ ಆಮಿಷಗಳನ್ನು ಒಡ್ಡುತ್ತಿದ್ದು. ಕ್ಷೇತ್ರದ ಪದವೀಧರರು ಪ್ರಜ್ಞಾವಂತರಾಗಿದ್ದಾರೆ ಅವರ ಅಮಿಷಗಳಿಗೆ ಒಳಪಟ್ಟು ಅವರಿಗೆ ಯಾವುದೇ ವ್ಯಕ್ತಿ ಮತ ನೀಡುವುದಿಲ್ಲ ಎಂಬ ಭರವಸೆ ಇದೆ.

ನಿರಂತರ ಸಮಾಜಮುಖಿ ಕಾರ್ಯಗಳ ಜೊತೆ ಜೊತೆಗೆ ಪದವೀಧರ ಕಷ್ಟಗಳಿಗೆ ಸ್ಪಂದಿಸಿದ್ದೇನೆ ಕ್ಷೇತ್ರದಾದ್ಯಂತ ಈಗಾಗಲೇ ಪ್ರಚಾರ ನಡೆಸಿದ್ದು ಉತ್ತಮ ಸ್ಪಂದನೆ ದೊರೆತಿದೆ . ಈ ಬಾರಿಯ ಚುನಾವಣೆಯಲ್ಲಿ ಪದವೀಧರರು ತಮ್ಮ ಹಕ್ಕನ್ನು ಪಡೆಯಲು ಹಾಗೂ ತಮ್ಮ ಸರ್ವತೋಮುಖ ಅಭಿವೃದ್ಧಿಗಾಗಿ ಮತ ಚಲಾಯಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ತಾಲೂಕಿನ ಹಲವು ಶಿಕ್ಷಕರು, ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.