*ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡರ ಹುಟ್ಟು ಹಬ್ಬದ ಸಂಭ್ರಮ : ಅಭಿಮಾನಿಗಳಿಂದ ಭರ್ಜರಿ ಕಾರ್ಯಕ್ರಮ ಯೋಜನೆ*

Spread the love

ದೊಡ್ಡಬಳ್ಳಾಪುರ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಎಂ ಹರೀಶ್ ಗೌಡರವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ನಗರದ ನೆಲದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಅದ್ದೂರಿಯಾಗಿ ಆಚರಣೆ ಮಾಡಿದ್ದರು.

ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಶುಭ ಕೋರಿದರು.

ತಾಲೂಕಿನಾದ್ಯಂತ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಪುಷ್ಪಹಾರ ಸಮರ್ಪಿಸುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಹುಟ್ಟುಹಬ್ಬದ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಹರೀಶ್ ಗೌಡರು ಪಾಲ್ಗೊಂಡು ಮಾತನಾಡಿ ಅಭಿಮಾನಿಗಳಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು . ನಿಸ್ವಾರ್ಥ ಜನಸೇವೆ ಮಾಡಿದ ಫಲ ನನಗೆ ಈ ಅಭಿಮಾನದ ರೂಪದಲ್ಲಿ ದೊರೆತಿದೆ ಎಂದು ಭಾವಿಸುತ್ತೇನೆ. ಅಭಿಮಾನಿಗಳ ಪ್ರೀತಿ ವಿಶ್ವಾಸ ನನ್ನ ಹುಮ್ಮಸ್ಸನ್ನು ದುಪ್ಪಟ್ಟು ಮಾಡಿವೆ. ತಾಲೂಕಿನಲ್ಲಿ ಮತ್ತಷ್ಟು ಸೇವೆ ಸಲ್ಲಿಸಲು ಧೈರ್ಯ ತುಂಬಿವೆ. ನನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳು ತಮ್ಮ ಹುಟ್ಟು ಹಬ್ಬದಂತೆ ವಿಜೃಂಭಣೆ ಹಾಗೂ ಸಂತೋಷದಿಂದ ಆಚರಿಸುತ್ತಿರುವುದು ನನ್ನ ಸಂತೋಷಕ್ಕೆ ಪಾರವಿಲ್ಲದಂತಾಗಿದೆ. ನನ್ನ ಹಿತೈಷಿಗಳು ಮತ್ತು ಸ್ನೇಹಿತರ ಅಭಿಮಾನಕ್ಕೆ ನಾನು ಸದಾ ಚಿರಋಣಿ ಎಂದು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ತಾಲ್ಲೂಕಿನ ಜೆಡಿಎಸ್ ಮುಖಂಡರಾದ ದಾಸಗೊಂಡನಹಳ್ಳಿ ಚಂದ್ರಣ್ಣ,ಅಶ್ವಥ್ ನಾರಾಯಣ ಮಂಡಿಬ್ಯಾಡರಹಳ್ಳಿ,ರಾ. ಬೈರೇಗೌಡರು, ಪ್ರವೀಣ್ ಶಾಂತಿನಗರ, ಸಂಜೀವ, ತರಿದಾಳು ಶ್ರೀನಿವಾಸ್, ಪ್ರಭಾಕರ್ ದೊಡ್ಡ ತುಮಕೂರು, ನರಸಿಂಹ ಗೌಡ, ,ತಳವಾರ್ ನಾಗರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.