*ನಗರದ ಐತಿಹಾಸಿಕ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ*

Spread the love

ದೊಡ್ಡಬಳ್ಳಾಪುರ : ತಾಲ್ಲೂಕಿನ ನಗರ ಭಾಗದ ಸೌಂದರ್ಯ ಮಹಲ್ ಮುಖ್ಯರಸ್ತೆಯಲ್ಲಿ ಶಿಥಿಲವಸ್ಥೆ ತಲುಪಿರುವ ಐತಿಹಾಸಿಕ ಪ್ರಸಿದ್ಧ ಭದ್ರಕಾಳಮ್ಮ ಸಮೇತ ರುದ್ರದೇವರ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮವು ಒಬದೇನಹಳ್ಳಿ ಮುನಿಯಪ್ಪ ನೇತೃತ್ವದಲ್ಲಿ ವೀರ ಶೈವ ಸಂಘದ ಪದಾಧಿಕಾರಿಗಳು ಹಾಗೂ ಭೋವಿ ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಒಬದೇನಹಳ್ಳಿ ಮುನಿಯಪ್ಪ ಮಾತನಾಡಿ ಐತಿಹಾಸಿಕ ಪ್ರಸಿದ್ಧ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯ ಶಿಥಿಲವಸ್ಥೆ ತಲುಪಿದ್ದು. ಸದರಿ ದೇವಾಲಯವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಭೋವಿ ಹಾಗೂ ವೀರ ಶೈವ ಸಮುದಾಯದ ಮುಖಂಡರು ಒಮ್ಮತದಿಂದ ನಿರ್ಧಾರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದು. ಐತಿಹಾಸಿಕ ದೇವಾಲಯದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿರುವುದು ಸಂತಸ ತಂದಿದೆ ಎಂದರು.

 

ವೀರ ಶೈವ ಸಮುದಾಯದ ಮುಖಂಡರಾದ ಸೋಮಣ್ಣ ಮಾತನಾಡಿ ಪಾಳು ಬಿದಿದ್ದ ದೇವಾಲಯವನ್ನು ಅಭಿವೃದ್ಧಿಪಡಿಸುವ ಮೂಲಕ 200 ವರ್ಷಗಳಷ್ಟು ಹಳೆಯ ಭದ್ರಾಕಾಳಮ್ಮ ಸಮೇತ ವೀರಭದ್ರಸ್ವಾಮಿ ದೇವಾಲಯದ ಉಳಿವಿಗೆ ಎರಡು ಸಮುದಾಯದ ಮುಖಂಡರು ಮುಂದಾಗಿರುವುದು ಸಂತಸ ತಂದಿದೆ. ನಗರ ಭಾಗದಲ್ಲಿ ಕೇವಲ ಒಂದು ವೀರಭದ್ರಸ್ವಾಮಿ ದೇವಾಲಯವಿದ್ದು ಈ ಜೀರ್ಣೋದ್ಧಾರ ಕಾರ್ಯವು ಆದಷ್ಟು ತೀವ್ರ ಗತಿಯಲ್ಲಿ ನೆಡೆಯಲಿದೆ ಎಂದರು

ಕಾರ್ಯಕ್ರಮದಲ್ಲಿ ವೀರ ಶೈವ ಸಂಘದ ಅಧ್ಯಕ್ಷರಾದ ಸೋಮ ರುದ್ರಶರ್ಮ, ಕಾರ್ಯದರ್ಶಿ ಮಂಜುನಾಥ್, ಖಜಾಂಜಿ ಗಗನ್ ,ಗಿರೀಶ್, ಮುಖಂಡರಾದ ಪಣೀಶ್, ಪರಮೇಶ್, ಗಿರೀಶ್ , ಶಿವನಂದಪ್ಪ , ಮಂಜುನಾಥ್ , ಉಮಾಪತಿ , ಸಿದ್ದಣ್ಣ , ನಗರ ಸಭಾ ಸದಸ್ಯ ಪದ್ಮರಾಜು, ಸದಸ್ಯರಾದ ಭಾಸ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *