*ಉತ್ತಮ ಆರೋಗ್ಯಕ್ಕಾಗಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿ – ಲೋಹಿತ್ ಗೌಡ*

Spread the love

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಮದುರೆ ವಲಯದ ರಾಮದೇವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಯಿತು.

 

ಶಾಲಾ ಆವರಣದಲ್ಲಿ ಸಸಿ ನಾಟಿ ಮಾಡಲಾಯಿತು ಹಾಗೂ ವಿತರಣೆ ಮಾಡಲಾಯಿತು

ಕಾರ್ಯಕ್ರಮದಲ್ಲಿ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ ಮಾತನಾಡಿ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು.
ಹವಾಮಾನ ವೈಪರಿತ್ಯದಿಂದಾಗಿ ಜನರು ಅನಾರೋಗ್ಯಕ್ಕಿಡಾಗುತ್ತಿದ್ದು ಸಸಿ ನೆಟ್ಟು ಪೋಷಣೆ ಮಾಡಿ ಸಂರಕ್ಷಣೆ ಮಾಡಿದ್ದಲ್ಲಿ ನಮಗೆ
ಸ್ವಚ್ಛ ಶುದ್ಧ ಗಾಳಿ ಸಿಗುವಂತಾಗುತ್ತದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ತಾಲೂಕಿನಾದ್ಯಂತ ಅರಣ್ಯಸಸಿ ನಾಟಿಗಳನ್ನು ಮಾಡುತ್ತಾ ಪರಿಸರ ಸಂರಕ್ಷಣೆ ಮಾಡುತ್ತಾ ಬರುತ್ತಿದ್ದೆವೆ, ಸಾರ್ವಜನಿಕರು ನಮ್ಮ ಈ ಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ಕೈ ಜೋಡಿಸಬೇಕೆಂದು ತಿಳಿಸಿದರು,

ಶಾಲಾ ಶಿಕ್ಷಕರಾದ ಗಂಗಲಕ್ಷಮ್ಮ ಮಾತನಾಡಿ ಧರ್ಮಸ್ಥಳ ಸಂಘದ ವತಿಯಿಂದ ಗಿಡ ನಾಟಿ ಮಾಡುತ್ತಿರುವುದು ಶ್ಲಾಘನೀಯ ಎಲ್ಲರು ಒಂದೊಂದು ಗಿಡ ನೆಟ್ಟರೆ ಪರಿಸರದಲ್ಲಿ ಉತ್ತಮ ಗಾಳಿ ಸಿಗುವಂತಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಗಿರಿಜಾ, ಶಿಕ್ಷಕರಾದ ಶಿವಲಕ್ಷ್ಮ್ಮಮ್ಮ ಸುಶೀಲಮ್ಮ, ಅಂಗನವಾಡಿ ಕಾರ್ಯಕರ್ತೆ ಗಂಗಾ ಲಕ್ಷ್ಮಮ್ಮ ಶೌರ್ಯ, ಪಂಕಜ, ಘಟಕದ ಸದಸ್ಯರು, ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರು ಹಾಜರಿದ್ದರು.

Leave a Reply

Your email address will not be published. Required fields are marked *