*ದೇವನಹಳ್ಳಿ:ತೋಟಗಾರಿಕೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ*

Spread the love

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 10 – ತೋಟಗಾರಿಕೆ ಇಲಾಖೆ, ದೇವನಹಳ್ಳಿ ತಾಲ್ಲೂಕು ವತಿಯಿಂದ 2024-25ನೇ ಸಾಲಿನಲ್ಲಿ ರೈತರಿಗೆ ಹೊಸದಾಗಿ ಬಿಡಿ ಹೂವು, ಕತ್ತರಿಸಿದ ಹೂವು, ಗಡ್ಡೆ ಜಾತಿಯ ಹೂವು, ದ್ರಾಕ್ಷಿ/ನುಗ್ಗೆ/ದಾಳಿಂಬೆ ಬೆಳೆಯನ್ನು ನಾಟಿ ಮಾಡಲು, ಮಲ್ಚಿಂಗ್ ಪೇಪರ್ ಅಳವಡಿಕೆ ಹಾಗೂ ಹಸಿರುಮನೆ(ಪಾಲಿಹೌಸ್) ನಲ್ಲಿ ಹೈಬ್ರಿಡ್ ತರಕಾರಿಗಳು, ಹೂವುಗಳು, ಹಣ್ಣುಗಳನ್ನು ಬೆಳೆಯಲು ಮತ್ತು ಪ್ಯಾಕ್ ಹೌಸ್ ನಿರ್ಮಾಣ, ಕೃಷಿಹೊಂಡ ನಿರ್ಮಾಣ, ಸೂಕ್ಷ್ಮ ಹನಿ ನೀರಾವರಿ ಪದ್ಧತಿ ಅಳವಡಿಕೆಗೆ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಕೇಂದ್ರ/ರಾಜ್ಯ ವಲಯ ಯೋಜನೆಗಳಾದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಅಟಲ್ ಭೂಜಲ್ ಯೋಜನೆ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆಗಳಡಿ ತಾಲ್ಲೂಕಿನ ರೈತರು ಸಹಾಯಧನ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ.

 

ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 31 ಆಗಿದ್ದು, ರೈತರುಗಳು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ದೇವನಹಳ್ಳಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, (ಜಿ.ಪಂ) ಪ್ರಸನ್ನಹಳ್ಳಿ ಮುಖ್ಯ ರಸ್ತೆ, ದೇವನಹಳ್ಳಿ ಟೌನ್ ಈ ಕಚೇರಿಗೆ ಸಲ್ಲಿಸಬಹುದಾಗಿದೆ.

 

*ಬೆಳೆವಿಮೆಗೆ ನೋಂದಣಿ*

 

ದೇವನಹಳ್ಳಿ ತಾಲ್ಲೂಕಿನ ದ್ರಾಕ್ಷಿ ಮತ್ತು ಮಾವು ಬೆಳೆಗಾರರಿಗೆ ಹವಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ ಹಾಗೂ ಆರ್ದ್ರತೆ ಇವುಗಳಿಂದ ಬೆಳೆಗೆ ಆಗುವ ಹಾನಿಯಿಂದ ರಕ್ಷಿಸಿಕೊಳ್ಳಲು ವಿಮಾ ಕಂಪನಿಗೆ ನೊಂದಾಯಿಸಿಕೊಂಡು ಹಾನಿಗೊಳಗಾದರೆ ಪರಿಹಾರಧನ ದೊರೆಯಲಿದೆ, ರೈತರು ಹೆಚ್ಚಿನ ಸಂಖ್ಯೆಯಲ್ಲಿ ನಿಗಧಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಮತ್ತು ಸ್ವಯಂ ಘೋಷಿತ ಬೆಳೆಯ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕ್/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಳ್ಳುವುದು. ವಿಮೆ ಮಾಡಿಸುವ ರೈತರು ಪ್ರೂಟ್ಸ್ (FRUITS) ತಂತ್ರಾಂಶದ ನೊಂದಣಿ ಸಂಖ್ಯೆಯನ್ನು ಹೊಂದಿರಬೇಕು. ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಸಿಕೊಂಡು ಪಾಲ್ಗೊಳ್ಳಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ KSHEMA ಆಧಿಸೂಚಿತ ವಿಮಾ ಸಂಸ್ಥೆಯಾಗಿದೆ.

 

ದೇವನಹಳ್ಳಿ ತಾಲ್ಲೂಕಿನ ಮಾವು ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-80,000ರೂ, ರೈತರು ಪಾವತಿಸಬೇಕಾದ ದರ (ಶೇ.5%)-4,000, ದ್ರಾಕ್ಷಿ ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-2,80,000ರೂ, ರೈತರು ಪಾವತಿಸಬೇಕಾದ ದರ (ಶೇ.5%ಗಳಲ್ಲಿ)-14,000 ಮಾವು ಮತ್ತು ದ್ರಾಕ್ಷಿ ಬೆಳೆಯುವ ರೈತ ಬಾಂಧವರು ಈ ಯೋಜನೆಯಡಿ ನೋಂದಾಯಿಸಿ ಉಪಯೋಗ ಪಡೆದುಕೊಳ್ಳುವುದು.

 

ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 31 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಅಧಿಕಾರಿಗಳನ್ನು ಸಂಪರ್ಕಿಸುವುದು. ದೇವನಹಳ್ಳಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಬಿ.ಎಂ.ಮಲ್ಲಿಕಾರ್ಜುನ ಬಾಬು ದೂ.ಸಂ-9480461234, ಕುಂದಾಣ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಪೂರ್ಣಿಮಬಾಬು ದೂ.ಸಂ-8867413260, ವಿಜಯಪುರ ಸಹಾಯಕ ತೋಟಗಾರಿಕೆ ಅಧಿಕಾರಿ ಆದರ್ಶ ಆರ್.ಕೆ ದೂ.ಸಂ- 8722487173, ಕಸಬಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಹರೀಶ್ ಕುಮಾರ್.ಟಿ.ಜಿ ದೂ.ಸಂ – 8971844173, ಚನ್ನರಾಯಪಟ್ಟಣ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಕವಿತಾ ಎಸ್ ಪೂಜಾರಿ ದೂ.ಸಂ– 7259612750 ಹಾಗೂ ವಿಮಾ ಕಂಪನಿಯ ದೂರವಾಣಿ ಸಂಖ್ಯೆ: 080 26564537/8884141262 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ದೇವನಹಳ್ಳಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

© 2026 Malnad TV. All Rights Reserved.