
ದೊಡ್ಡಬಳ್ಳಾಪುರ : ಎಲ್ಲೆಡೆ ಡೆಂಗ್ಯೂ ( ಜ್ವರ ) ಕಾಯಿಲೆ ಹರಡುತ್ತಿದೆ ಈ ಕುರಿತು ಸಾರ್ವಜನಿಕರು ಜಾಗೃತರಾಗಬೇಕಿದೆ. ಸೊಳ್ಳೆ ಪರದೆ ಹಾಗೂ ಕಾಯಿಲ್ ಗಳನ್ನು ವಿತರಣೆ ಮಾಡುವ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಭಾಸ್ಕರ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಭಾರತೀಯ ರೆಡ್ ಕ್ರಾಸ್ ಹಾಗೂ ಸನ್ನದ್ಧ ಸಂಸ್ಥೆ ವತಿಯಿಂದ ನಾಗರಿಕರಿಗೆ ಡೆಂಗ್ಯೂ ಕಾಯಿಲೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು. ತಾಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೊಳ್ಳೆ ಪರದೆ ಮತ್ತು ಸೊಳ್ಳೆ ಕಾಯಿಲ್ ಗಳನ್ನು ವಿತರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರಾಜ್ಯದ ಎಲ್ಲೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು. ಸೊಳ್ಳೆಗಳ ಕಡಿತದಿಂದ ರಕ್ಷಣೆ ಅತ್ಯಗತ್ಯವಾಗಿದೆ, ನಿರಂತರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಚರಣೆ ಮಾಡಲಾಗುತ್ತಿದ್ದು ಜೊತೆಗೆ ಸಾರ್ವಜನಿಕರಿಗೆ ಸಹಕಾರಿಯಾಗುವಂತೆ ಸೊಳ್ಳೆ ಪರದೆ ಮತ್ತು ಕಾಯಿಲ್ ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.
ಅನ್ನದಾಸೋಹ ಸಮಿತಿಯ ಮುಖ್ಯಸ್ಥ ಅನ್ನದಾಸೋಹಿ ಮಲ್ಲೇಶ್ ಮಾತನಾಡಿ ಭಾರತೀಯ ರೆಡ್ ಕ್ರಾಸ್ ಹಾಗೂ ಸನ್ನದ್ಧ ಸಂಸ್ಥೆಯ ವತಿಯಿಂದ ಶ್ರೀ ಚಂದ್ರಕಾಂತ್ ಹಾಗೂ ಭಾಸ್ಕರ್ ರವರ ನೇತೃತ್ವದಲ್ಲಿ ನಿರಾಶ್ರಿತರಿಗೆ, ಕಡುಬಡವರಿಗೆ ಡೆಂಗ್ಯೂ ವಿನಂತಹ ಮಹಾಮಾರಿಯಿಂದ ಪಾರಾಗಲು ಸಹಕಾರಿಯಾಗುವ ಸೊಳ್ಳೆ ಪರದೆಗಳು ಮತ್ತು ಸೊಳ್ಳೆಬತ್ತಿ ಕಾಯಲ್ ಗಳನ್ನು ವಿತರಣೆ ಮಾಡಲಾಗಿದ್ದು. ಡೆಂಗ್ಯೂ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದೆ. ಎರಡು ಸಂಸ್ಥೆಯ ಪದಾಧಿಕಾರಿಗಳಿಗೆ ಶುಭವಾಗಲಿ ಅವರ ಸೇವಕಾರಿಯ ಮತ್ತಷ್ಟು ಬೆಳೆಯಲಿ ಎಂದು ಹಾರೈಸಿದರು
ಈ ಸಂದರ್ಭದಲ್ಲಿ ನಿರಂತರ ಅನ್ನದಾಸೋಹ ಸಮಿತಿಯ ಸದಸ್ಯರುಉಪಸ್ಥಿತರಿದ್ದರು.