*ಆರೋಗ್ಯ ಸಮಸ್ಯೆ ಕುರಿತು ಗ್ರಾಮಸ್ಥರ ದೂರು : ಆರೋಗ್ಯ ತಪಾಸಣಾ ಶಿಬಿರದ ಮೂಲಕ ಪರಿಶೀಲನೆಗೆ ಮುಂದಾದ ನ್ಯಾಯಾಂಗ ಇಲಾಖೆ*

Spread the love

ದೊಡ್ಡಬಳ್ಳಾಪುರ : ಸ್ಥಳೀಯ ಇಂಡೇನ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ವಿರುದ್ಧ ಸ್ಥಳೀಯ ಗ್ರಾಮಸ್ಥರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ಸಹಯೋಗದೊಂದಿಗೆ ಜುಲೈ 27ರಂದು ರಘುನಾಥಪುರ ಗ್ರಾಮದಲ್ಲಿ ಗ್ರಾಮಸ್ಥರಿಗೆ ಆರೋಗ್ಯ ತಪಾಸರ ಶಿಬಿರ ಆಯೋಜನೆ ಮಾಡಲಾಗಿತ್ತು.

 

ಶಿಬಿರದಲ್ಲಿ ನೂರಾರು ಗ್ರಾಮಸ್ಥರು ಪಾಲ್ಗೊಂಡು ಡಿಪಿ, ಶುಗರ್, ತಲೆನೋವು, ಜ್ವರ,ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಸೇರಿದಂತೆ ಹಲವು ಸಮಸ್ಯೆಗಳಿಗೆ ಆರೋಗ್ಯ ಇಲಾಖೆಯಿಂದ ಪ್ರಾಥಮಿಕವಾಗಿ ಚಿಕಿತ್ಸೆ ನೀಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡ ಆರ್ ಎಂ ಮಹದೇವ್ ಮಾತನಾಡಿ ರಘುನಾಥಪುರ ಗ್ರಾಮಸ್ಥರು ಆರೋಗ್ಯ ಸಮಸ್ಯೆ ಕುರಿತಾಗಿ ನ್ಯಾಯಾಲಯಕ್ಕೆ ದೂರು ನೀಡಿದ್ದು ಈ ಸಂಬಂಧ ನ್ಯಾಯಾಂಗ ಇಲಾಖೆಯ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಗ್ರಾಮಸ್ಥರ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ.

 

ಶಿಬಿರದಲ್ಲಿ ಪಾಲ್ಗೊಂಡ ಗ್ರಾಮಸ್ಥರಲ್ಲಿ ಸಾಮಾನ್ಯವಾಗಿ ಜ್ವರ,ಮೈ ಕೈ ನೋವು, ತಲೆ ನೋವು, ಸೇರಿದಂತೆ ಉಸಿರಾಟದ ತೊಂದರೆ ಕಂಡುಬರುತ್ತಿದ್ದು. ಈ ಕುರಿತು ಆರೋಗ್ಯ ಇಲಾಖೆ ಸೂಕ್ಷ್ಮವಾಗಿ ಗಮನಿಸಬೇಕಿದೆ. ನಮ್ಮ ಗ್ರಾಮಸ್ಥರ ಆರೋಗ್ಯ ಸಮಸ್ಯೆಗಳಿಗೆ ಮುಖ್ಯ ಕಾರಣ ಸ್ಥಳೀಯವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇಂಡೇನ ಕಾರ್ಖಾನೆಯಿಂದ ಹೊರಬರುವ ವಿಷಕಾರಿ ಅನಿಲವೇ ಆಗಿದೆ. ಕಾರ್ಖಾನೆಯನ್ನು ಈ ಕೂಡಲೇ ವರ್ಗಾಯಿಸುವ ಮೂಲಕ ಸ್ಥಳೀಯರ ಜೀವ ಉಳಿಸಬೇಕಿದೆ. ಎಂದು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು .

ಗ್ರಾಮಸ್ಥರಾದ ಮುನಿರಾಜಪ್ಪ ಮಾತನಾಡಿ ಈಗಾಗಲೇ ತಾಲೂಕಿನ ಜನತೆ ಅಧಿಕಾರಿಗಳಿಗೆ ಗ್ರಾಮದ ಪ್ರಸ್ತುತ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು ಗ್ರಾಮಸ್ಥರ ಆರೋಗ್ಯ ಕಾಪಾಡುವಂತೆ ಮನವಿ ಮಾಡಿದ್ದೇವೆ, ನ್ಯಾಯಾಲಯಕ್ಕೆ ಗ್ರಾಮಸ್ಥರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇಂದು ಗ್ರಾಮದಲ್ಲಿ ಸರ್ಕಾರದ ವತಿಯಿಂದ ಆರೋಗ್ಯ ತಪಾಸದ ಶಿಬಿರವನ್ನು ಯೋಜನೆ ಮಾಡಲಾಗಿದೆ. ಈಗಾಗಲೇ ನೂರಾರು ಗ್ರಾಮಸ್ಥರು ವೈದ್ಯರ ಬಳಿ ಬಂದು ಸಲಹೆ ಪಡೆದಿದ್ದಾರೆ. ಬರ ಬರುತ್ತಾ ಗ್ರಾಮದಲ್ಲಿ ಆರೋಗ್ಯ ಕ್ಷೀಣಿಸುತ್ತಿದ್ದು. ಸರ್ಕಾರ ಹಾಗೂ ಸ್ಥಳೀಯ ಅಧಿಕಾರಿಗಳು ಈ ಕುರಿತು ಗಮನ ಹರಿಸಬೇಕಿದೆ ಎಂದರು.

 

ಆರೋಗ್ಯ ತಪಾಸಣಾ ಶಿಬಿರದಲ್ಲಿ ಆರ್ ಎಚ್ ಚನ್ನಪ್ಪ, ಆರ್. ಎಂ ಲಕ್ಷ್ಮೀಪತಿ,ನರಸಿಂಹಮೂರ್ತಿ, ಆರ್. ಜಿ.ಗಂಗರಾಜು, ಜಗದೀಶ್ ಸೇರಿದಂತೆ ಗ್ರಾಮದ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.