*ಪ್ರೊ.ಬಿ. ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ರ ಸಂಭ್ರಮೋತ್ಸವ : ಕಾರ್ಯಕ್ರಮದಲ್ಲಿ 10000ಕ್ಕೂ ಅಧಿಕ ಮಂದಿ ಭಾಗಿಯಾಗುವ ಸಾಧ್ಯತೆ*

Spread the love

ದೊಡ್ಡಬಳ್ಳಾಪುರ ಆಗಸ್ಟ್ 07 ( ವಿಜಯಮಿತ್ರ) : ಬೆಂಗಳೂರಿನ ವಸಂತ ನಗರದ ಮಿಲ್ಲರ್ಸ್ ರಸ್ತೆಯ ಡಾ.ಅಂಬೇಡ್ಕರ್‌ಭವನದಲ್ಲಿ ನೆಡೆಯಲಿರುವ ಕರ್ನಾಟಕದ ದಲಿತ ಚಳವಳಿಯ 50 ವರ್ಷದ ಸಂಭ್ರಮೋತ್ಸವಕ್ಕೆ ಯುವ ದಲಿತ ಮುಖಂಡ ರಾಮಾಮೂರ್ತಿ (ರಾಮು)ನೇರಳಘಟ್ಟ ನೇತೃತ್ವದಲ್ಲಿ ನೂರಾರು ದಲಿತ ಮುಖಂಡರು ತಾಲ್ಲೂಕಿನಿಂದ ಕಾರ್ಯಕ್ರಮಕ್ಕೆ ತೆರಳಿದರು.

 

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಶಾಖೆ ಸಂಚಾಲಕ ರಾಮಾಮೂರ್ತಿ (ರಾಮು)ನೇರಳಘಟ್ಟ ಮಾತನಾಡಿ ಪ್ರೊಫೆಸರ್ ಬಿ ಕೃಷ್ಣಪ್ಪರವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ. ಸಂಖ್ಯೆ. 47/74-75) ಯ ಚಳವಳಿಗೆ 50 ವರ್ಷಗಳು ಪೂರ್ಣಗೊಂಡಿದ್ದು. ಈ ಸಂಭ್ರಮಾಚರಣೆಯಲ್ಲಿ ರಾಜ್ಯದ ಪ್ರತಿ ತಾಲ್ಲೂಕು ಹಾಗೂ ಗ್ರಾಮಗಳಿಂದ 10000ಕ್ಕೂ ಅಧಿಕ ಮುಖಂಡರು ಪಾಲ್ಗೊಳ್ಳುತ್ತಿದ್ದು. ಈ ಕಾರ್ಯಕ್ರಮವು ಇತಿಹಾಸ ಸೃಷ್ಟಿಸಲಿದೆ ಎಂದರು.

 

ನಮ್ಮ ತಾಲ್ಲೂಕಿನಿಂದ ನೂರಾರು ಮುಖಂಡರು ಸಮಾರಂಭದಲ್ಲಿ ಭಾಗವಹಿಸುತ್ತಿದ್ದು ಹತ್ತಾರು ವಾಹನಗಳ ಮೂಲಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದೇವೆ.ರಾಜ್ಯ ಸಮಿತಿ ನೇತೃತ್ವದಲ್ಲಿ ನೆಡೆಯುತ್ತಿರುವ ಸಂಭ್ರಮೋತ್ಸವ ರಾಜ್ಯ ಜನತೆಯ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲಿದೆ ಎಂದರು

 

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಪ್ರಮುಖರಾದ ನಂದಿಗುಂದ ಮೈಲಾರಪ್ಪ,ಮದುರೆ ನರಸಿಂಹಮೂರ್ತಿ, ನರಸಿಂಹಮೂರ್ತಿ ದೊಡ್ಡ ಕುಕ್ಕನಹಳ್ಳಿ, ನಾಗರತ್ನಮ್ಮ ಮಲ್ಲೋಹಳ್ಳಿ, ಮನು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *