
ದೊಡ್ಡಬಳ್ಳಾಪುರ (ವಿಜಯಮಿತ್ರ) :ತಾಲೂಕಿನ ಬಾಶೆಟ್ಟಿಹಳ್ಳಿ ಅಂಬೇಡ್ಕರ್ ನಗರದ ನಿವಾಸಿ ಕಿರಣ್ ಕುಮಾರ್ ಅವರು ತಮ್ಮ 24ನೇ ಹುಟ್ಟು ಹಬ್ಬವನ್ನು ನಿರಂತರ ಹಣದ ಸಹ ಸಮಿತಿಯೊಂದಿಗೆ ಆಚರಿಸಿಕೊಂಡರು.
ಶಾಲಾ ಮಕ್ಕಳಿಗೆ ಅಗತ್ಯ ಪರಿಕರಗಳ ವಿತರಣೆ ಮಾಡುವ ಮೂಲಕ ಹಾಗೂ ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ತಮ್ಮ ಈ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು.
ಕಾರ್ಯಕ್ರಮದಲ್ಲಿ ದಾನಿಗಳಾದ ಸುನಿಲ್ ಮಾತನಾಡಿ ಹಲವಾರು ದಿನಗಳಿಂದ ಮಲ್ಲೇಶ್ ಅವರು ಮಾಡುತ್ತಿರುವ ಅನ್ನದಾಸೋಹದ ಬಗ್ಗೆ ತಿಳಿದಿದ್ದು. ಇಂದು ನನ್ನ ಆತ್ಮೀಯ ಗೆಳೆಯ ಕಿರಣ್ ರವರ ಹುಟ್ಟು ಹಬ್ಬವನ್ನು ನಿರಂತರ ಅನ್ನದಾಸೋಹ ಸಮಿತಿಯೊಂದಿಗೆ ಆಚರಿಸಲು ಇಚ್ಛಿಸಿದ್ದು. ಶಾಲಾ ಮಕ್ಕಳಿಗೆ ನೋಟ್ ಬುಕ್, ಪೆನ್ ವಿತರಣೆ ಹಾಗೂ ಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ ಆಚರಿಸಿಕೊಂಡಿರುವುದು ಸಂತಸತಂದಿದೆ ಎಂದರು.
ದಾನಿಗಳಾದ ಕಿರಣ್ ಮಾತನಾಡಿ ಪ್ರತಿ ವರ್ಷವು ಅನಗತ್ಯ ದುಂದು ವೆಚ್ಚ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಗುತ್ತಿತ್ತು. ಈ ಬಾರಿ ವಿಶೇಷವಾಗಿ ಶಾಲಾ ಮಕ್ಕಳಿಗೆ ಅಗತ್ಯ ಪರಿಕರಗಳನ್ನು ವಿತರಣೆ ಮಾಡುವ ಮೂಲಕ ಹಾಗೂ ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವುದು ವಿಶೇಷವೆನಿಸುತ್ತದೆ ಮುಂದೆ ಇದೇ ರೀತಿ ನಮ್ಮ ವಿಶೇಷ ದಿನಗಳನ್ನು ಅನ್ನದಾಸೋಹ ಸಮಿತಿಯೊಂದಿಗೆ ಆಚರಿಸಲು ನಿರ್ಧರಿಸಿದ್ದೇನೆ ಎಂದರು.
ಕಾರ್ಯಕ್ರಮದ ಆಯೋಜಕ ಮಲ್ಲೇಶ್ ಮಾತನಾಡಿ 1600ನೇ ದಿನದ ದಾನಿಗಳಾಗಿ ತಮ್ಮ ಹುಟ್ಟು ಹಬ್ಬದ ಆಚರಣೆಯನ್ನು ವಿಶೇಷವಾಗಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಪೆನ್ ವಿತರಣೆ ಮಾಡುವ ಮೂಲಕ ಹಾಗೂ ನಿರಾಶ್ರಿತ ಕಡುಬಡವರಿಗೆ, ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ಕಿರಣ್ ರವರು ಸಮಾಜಕ್ಕೆ ಮಾದರಿಯಾಗಿದ್ದಾರೆ. ತಮ್ಮ ಹುಟ್ಟು ಹಬ್ಬಕ್ಕೆ ದುಂದು ವೆಚ್ಚ ಮಾಡುವ ಮೂಲಕ ಹಣ ವ್ಯರ್ಥ ಮಾಡದೆ ಅವಶ್ಯಕತೆ ಇರುವ ಜನರಿಗೆ ದಾನ ಮಾಡಿರುವುದು ಶ್ಲಾಘನಿಯ ಸಂಗತಿಯಾಗಿದೆ ಎಂದರು.
ಸಮಾಜದಲ್ಲಿ ದಾನ ಮಾಡಲು ಇಚ್ಚಿಸುವ ಯಾರಾದರೂ ತಮ್ಮ ವಿಶೇಷ ದಿನಗಳನ್ನು ಅನ್ನದಾಸೋಹ ಸಮಿತಿಯೊಂದಿಗೆ ಹಸಿದವರಿಗೆ ಆಹಾರ ವಿತರಣೆ ಮಾಡುವ ಮೂಲಕ ಆಚರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಿರಣ್ ಕುಟುಂಬಸ್ಥರು, ಅನ್ನದಾಸೋಹ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು