ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ….???

Spread the love

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ನಡೆದಿದ್ದು, ಹುಂಡಿಯಲ್ಲಿ ಒಟ್ಟು 51,76,495 ರೂ. ಸಂಗ್ರಹವಾಗಿದೆ.

ಜೊತೆಗೆ 7, 600 ರೂ ಮೌಲ್ಯದ 2ಗ್ರಾಂ ಚಿನ್ನ, ಹಾಗೂ ರೂ 48,000 ಮೌಲ್ಯದ 1 ಕೆಜಿ 94 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.

Ad

ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನೆಡೆಯಿತು ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ ಹಾಗೂ ಮುಜರಾಯಿ ಇಲಾಖೆ ತಹಶೀಲ್ದಾ‌ರ್ ಜೆ.ಜೆ.ಹೇಮಾವತಿ ಪ್ರಧಾನ ಅರ್ಚಕ ಆ‌ರ್.ಸುಬ್ರಹ್ಮಣ್ಯ, ಕೆನರಾ ಬ್ಯಾಂಕ್ ಸಿಬ್ಬಂದಿ ಹಾಗೂ ಪೊಲೀಸ್‌ ಇಲಾಖೆ ಸಿಬ್ಬಂದಿ, ದೇವಾಲಯಕ್ಕೆ ಬಂದ ಭಕ್ತಾಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.