ಒಳ ಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಸಂಘಟನೆಗಳ ಪ್ರತಿಭಟನೆ

Spread the love

ಬೀರಸಂದ್ರ ( ವಿಜಯಮಿತ್ರ ): ಸುಪ್ರೀಂ ಕೋರ್ಟ್ ಈಗಾಗಲೇ ಜಾರಿಗೊಳಿಸಿರುವ ಒಳಬಿಸಲಾತಿ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಮಾದಿಗ ಸಮುದಾಯದ ಮುಖಂಡರ ಜೊತೆ ವಿವಿಧ ದಲಿತ ಸಂಘಟನೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದವು.

ಪ್ರತಿಭಟನೆಯಲ್ಲಿ ರಾಜ್ಯ ಮುಖಂಡರಾದ ಬುಳ್ಳಳಿ ರಾಜು ಮಾತನಾಡಿ ಪ್ರತಿ ಚುನಾವಣೆಯಲ್ಲೂ ನಿರ್ಣಾಯಕ ಮತಗಳನ್ನು ಹೊಂದಿರುವ ಮಾದಿಗ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದರು ರಾಜ್ಯ ಸರ್ಕಾರ ಆದೇಶವನ್ನು ಜಾರಿಗೆ ತರಲು ಮುಂದಾಗುತ್ತಿಲ್ಲ , ಈ ಕುರಿತಂತೆ ಏಕಕಾಲದಲ್ಲಿ ರಾಜ್ಯದ್ಯಂತ ಮಾದಿಗ ಸಮುದಾಯವು ಈ ಚಳುವಳಿಯನ್ನು ಹಮ್ಮಿಕೊಂಡಿದೆ ಮುಖ್ಯಮಂತ್ರಿಗಳು ಈ ಕೂಡಲೇ ಯಥಾವತ್ತಾಗಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು

Ad

ದಲಿತ ಮುಖಂಡ ಮಾ. ಮುನಿರಾಜು ಮಾತನಾಡಿ ಸದಾ ಸಮಪಾಲು ಸಮ ಬಾಳು, ಸಾಮಾಜಿಕ ನ್ಯಾಯ ಕುರಿತು ಮಾತನಾಡುವ ಸಮುದಾಯದ ಮುಖಂಡರು ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಟ್ಟಿದ್ದರೆ ನಾವೇಗೆ ಹೋರಾಟಕ್ಕೆ ಮುಂದಾಗಬೇಕಿತ್ತು. ಇದು ನಮ್ಮ ಹಕ್ಕು, ಸುಪ್ರೀಂ ಕೋರ್ಟ್ ನೀಡುವ ಆದೇಶವನ್ನು ಯಥಾವತ್ತಾಗಿ ಸರ್ಕಾರ ಜಾರಿಗೊಳಿಸಬೇಕು ಇಲ್ಲವಾದಲ್ಲಿ ಮುಂದೆ ಮಾದಿಗ ಸಮುದಾಯ ಉಗ್ರ ಹೋರಾಟಕ್ಕೆ ಮುಂದಾಗಲಿದೆ ಎಂದರು.

ಪ್ರತಿಭಟನೆಯಲ್ಲಿ ಸಮುದಾಯದ ಮುಖಂಡರಾದ ದೇವನಹಳ್ಳಿ ನರಸಿಂಹಮೂರ್ತಿ, ಆದಿತ್ಯ ನಾಗೇಶ್, ಟಿ.ಡಿ.ಮುನಿಯಪ್ಪ, ಅಂಜನಮೂರ್ತಿ, ಮಾರಪ್ಪ, ರಾಮಕೃಷ್ಣಪ್ಪ, ಮುತ್ತುರಾಜು, ನರೇಂದ್ರ ಮೂರ್ತಿ, ಹರ್ಷ, ಹನುಮಯ್ಯ.ಬಿ ಸೇರಿದಂತೆ ಹಲವು ಸಂಘಟನೆಗಳ ದಲಿತ ಮುಖಂಡರು ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

© 2026 Malnad TV. All Rights Reserved.