ನಟ ಸುದೀಪ್ ಕುಟುಂಬಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್

Spread the love

ಕನ್ನಡದ ಹೆಸರಾಂತ ನಟ ಸುದೀಪ್ ಅವರ ತಾಯಿ ನಿಧನರಾದ ಹಿನ್ನಲೆ ಕೋಟ್ಯಾಂತರ ಅಭಿಮಾನಿಗಳು ಹೊಂದಿರುವ ನಟ ಸುದೀಪ್ ರವರಿಗೆ ದೇಶ ವಿದೇಶಗಳಿಂದ ಹಲವು ಗಣ್ಯರು ಸಂತಾಪ ಸೂಚಿಸುವ ಮೂಲಕ ತಮ್ಮ ಭಾವನೆ ವ್ಯಕ್ತಪಡಿಸಿದ್ದರು.

 

ಈಗ ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್ ರವರು ಪತ್ರ ಬರೆಯುವ ಮೂಲಕ ನಟ ಸುದೀಪ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

 

ಪಾತ್ರದಲ್ಲಿ ಏನಿದೆ…???

 

ಖ್ಯಾತ ನಟ ಶ್ರೀ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಎಂದು ಶ್ರೀ ಸುದೀಪ್ ಅವರು ಹೇಳಿದ್ದರು. ತಾಯಿಯ ನಷ್ಟದಿಂದ ಬೇಗ ಚೇತರಿಸಿಕೊಳ್ಳಬೇಕು. ಶ್ರೀ ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು ಎಂದು ಪತ್ರ ರವಾನೆ ಮಾಡಿದ್ದಾರೆ.

 

 

 

Leave a Reply

Your email address will not be published. Required fields are marked *

© 2026 Malnad TV. All Rights Reserved.