ಸಿರಿಧಾನ್ಯ ಬಳಕೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಕೃಷಿ ತರಬೇತಿ

Spread the love

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ತೂಬಗೆರೆ ವಲಯದ ಚನ್ನಾಪುರ ಗ್ರಾಮದಲ್ಲಿ ಸಿರಿಧಾನ್ಯ ಬಳಕೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಕೃಷಿ ತರಬೇತಿ ನೀಡಲಾಯಿತು.

 

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ನವೀನ್ ಮಾತನಾಡಿ ಮಣ್ಣಿನ ಫಲವತ್ತತೆ ಹೆಚ್ಚಿಸುವ ಬಗ್ಗೆ ಹಾಗೂ ಹವಾಮಾನ ವೈಪರಿತ್ಯದಿಂದ ಕೃಷಿ ಬೆಳೆಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು, ಮತ್ತು ಸಿರಿಧಾನ್ಯಗಳು ನಮ್ಮ ಆರೋಗ್ಯಕ್ಕೆ ಸಹಕಾರಿಯಾಗುವುದಷ್ಟೇ ಅಲ್ಲದೆ ರೈತರಿಗೆ ವಾಣಿಜ್ಯ ಬೆಳೆಯಾಗಿ ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಲು ಸಹಕಾರಿಯಾಗಿದೆ. ಪ್ರಸ್ತುತ ಸಿರಿಧಾನ್ಯಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆಯುತ್ತಿದ್ದು ರೈತರು ಸಿರಿಧಾನ್ಯ ಬೆಳೆಯುವಲ್ಲಿ ಹೆಚ್ಚು ಒತ್ತು ನೀಡಬೇಕಿದೆ ಎಂದು ತಿಳಿಸಿದರು.

 

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಸುಧಾ ಬಾಸ್ಕರ್ ಮಾತನಾಡಿ ಪಾಲಿಷ್ ಅಕ್ಕಿಯಿಂದ ಅನಾರೋಗ್ಯ ಜಾಸ್ತಿ ಆಗುತ್ತಿದ್ದು ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯ ಹೆಚ್ಚಳ ಆಗುವುದು, ಸಿರಿಧಾನ್ಯ ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ನಮ್ಮಿಂದಾಗಬೇಕಿದೆ, ರೈತರು ಅಧಿಕ ಆದಾಯ ಗಳಿಸುವುದರ ಜೊತೆಜೊತೆಗೆ ಉತ್ತಮ ಆರೋಗ್ಯವಂತ ಸಮಾಜ ನಿರ್ಮಿಸಲು ಸಿರಿಧಾನ್ಯಗಳು ಸಹಕಾರಿಯಾಗಿವೆ ಸ್ಥಳೀಯ ರೈತರು ಸಿರಿ ಧಾನ್ಯಗಳ ಬಗ್ಗೆ ಅರಿವು ಪಡೆಯುವ ಮೂಲಕ ಸಿರಿಧಾನ್ಯ ಬೆಳೆಯಲು ಮುಂದಾಗುವಂತೆ ತಿಳಿಸಿದರು.

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ ಮಾತನಾಡಿ ಯೋಜನೆಯಿಂದ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹ ಮಾಡುವ ನಿಟ್ಟಿನಲ್ಲಿ ರೈತರಿಗೆ ತರಬೇತಿ ನೀಡುವುದು,ಅದ್ಯಾಯನ ಪ್ರವಾಸದ ಮೂಲಕ ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ, ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ವ್ಯವಸಾಯ ಪದ್ಧತಿ ಅಳವಡಿಸಿಕೊಳ್ಳಬೇಕಿದೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ನಿರಂತರವಾಗಿ ಮಾಡುತ್ತಿದ್ದು ಸದಸ್ಯರು ಈ ಕಾರ್ಯಕ್ರಮಗಳ ಉಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು

 

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಮುನಿರಾಜು,ಸೇವಾಪ್ರತಿನಿಧಿ ಸಿದ್ದಗಂಗಮ್ಮ,ಪ್ರಗತಿಬಂಧು ಸಂಘದ ಸದಸ್ಯರು ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರು ಹಾಜರಿದ್ದರು

Leave a Reply

Your email address will not be published. Required fields are marked *

© 2026 Malnad TV. All Rights Reserved.