ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸುದ್ದಿಗೋಷ್ಠಿ : ರಾಜ್ಯದ ರೈತರಿಂದ ಡಿ. 13 ರಂದು ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮ

Spread the love

ದೊಡ್ಡಬಳ್ಳಾಪುರ : ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸುವರ್ಣ ಸೌದ ಮುತ್ತಿಗೆ ಹಾಕಲಿದ್ದೇವೆ ಎಂದು ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಚಳಿಗಾಲದ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಕುರಿತು ಚರ್ಚಿಸದ ರಾಜ್ಯ ಸರ್ಕಾರದ ವಿರುದ್ಧ ಡಿಸೆಂಬರ್ 13 ರಂದು ರಾಜ್ಯದ ಹಲವು ಭಾಗದ ರೈತರು ಸುವರ್ಣಸೌಧ ಕ್ಕೆ ಮುತ್ತಿಗೆ ಹಾಕುವ ಮೂಲಕ ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು

 

 

ವಾಕ್ಫ್ ಬೋರ್ಡ್, ಬಗರ್ ಹುಕುಂ, ಸರ್ಕಾರಿ ದಾಖಲಾತಿಗಳನ್ನು ಪಡೆಯುವಲ್ಲಿ ರೈತರ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ರಾಜ್ಯ ಸರ್ಕಾರಕ್ಕೆ ತಿಳಿಸುವ ನಿಟ್ಟಿನಲ್ಲಿ ಈ ಪ್ರತಿಭಟನೆಗೆ ಮುಂದಾಗಿದ್ದು ಈ ಪ್ರತಿಭಟನೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ರೈತರು ಪಾಲ್ಗೊಳ್ಳುತ್ತಿದ್ದಾರೆ ಎಂದರು.

 

ತಾಲ್ಲೂಕು ಅಧ್ಯಕ್ಷ ಹನುಮೇಗೌಡ ಈ ಹಿಂದೆ 15 ತಿಂಗಳ ರೈತರ ನಿರಂತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದು ಕಾಯಿದೆಗಳನ್ನು ಹಿಂಪಡೆದಿದೆ ಅದರೆ ರಾಜ್ಯ ಸರ್ಕಾರ ಇವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಕಾಯಿದೆ ಹಿಂಪಡೆದಿಲ್ಲ,ಬೆಳಗಾವಿ ಅಧಿವೇಶನದಲ್ಲಿ ಭೂ ಸುಧಾರಣೆ ಕಾಯಿದೆ ಯನ್ನು ಹಿಂಪಡೆಯುತ್ತೇವೆ ಎಂದು ಭರವಸೆ ನೀಡಿದ ರಾಜ್ಯ ಸರ್ಕಾರ ಮರೆತಿದೆ ಈ ಕುರಿತು ನಮ್ಮ ಹೋರಾಟ ಬೆಳಗಾವಿಯಲ್ಲಿ ನೆಡೆಯಲಿದೆ ಎಂದರು. ಅಭಿವೃದ್ದಿ ಹೆಸರಿನಲ್ಲಿ ಫಲವತ್ತಾದ ನೂರಾರು ಎಕ್ಕರೆ ಭೂ ಸ್ವಧೀನ ಪಡಿಸಿಕೊಳ್ಳಲಾಗುತ್ತಿದೆ, ರೈತರ ಬೆಂಬಲವಾಗಿ ನಿಲ್ಲಬೇಕಿದ್ದ ಸರಕಾರ ರೈತರ ಜೀವನಕ್ಕೆ ಮುಳುವಾಗುತ್ತಿರುವುದು ಸರಿಯಲ್ಲ ಎಂದರು.

 

ಸುದ್ದಿಗೊಷ್ಟಿಯಲ್ಲಿ ನಾಗರಾಜು, ಟಿ ಜಿ ವಾಸುದೇವ್, ಸತೀಶ್, ಕೆ ಟಿ ಮಹದೇವ್ , ಆರ್. ಸತೀಶ್, ಮುನಿನಾರಾಯಣಪ್ಪ, ಕೇಶವ್ ಮೂರ್ತಿ, ಧನಂಜಯ, ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

© 2026 Malnad TV. All Rights Reserved.