
ದೊಡ್ಡಬಳ್ಳಾಪುರ : ತಾಲ್ಲೂಕಿನ ದೊಡ್ಡ ಬೆಲವಂಗಲ ವಲಯದ ಹುಲಿಕುಂಟೆ ಸರ್ಕಾರಿ ಪ್ರೌಢಶಾಲೆ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಇವರ ವತಿಯಿಂದ ಮಾದಕ ವ್ಯಸನಗಳ ದುಷ್ಪರಿಣಾಮಗಳ ಅರಿವಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಮಾತನಾಡಿ ಭಾರತ ವಿಶ್ವದಲ್ಲಿ ಅತೀ ಹೆಚ್ಚು ಯುವಕ ಯುವತಿಯರನ್ನು ಹೊಂದಿದ ದೇಶವಾಗಿದೆ ಹೆಚ್ಚಿನ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಮಹಾತ್ಮ ಗಾಂಧೀಜಿ ಅವರ ದುಶ್ಚಟ ಮುಕ್ತ ದೇಶದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಅರಿವು ಕಾರ್ಯಕ್ರಮಗಳು ಅತಿ ಮುಖ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಗೋವಿಂದರಾಜು ಮಾತನಾಡಿ ಬೀಡಿ, ಸಿಗರೇಟು,ಗುಟ್ಕಾ , ಗಾಂಜಾ,ಅಫೀಮ್, ಮದ್ಯಸೇವನೆ ಸೇರಿ ಇನ್ನಿತರ ಮಾದಕ ವಸ್ತುಗಳ ಸೇವನೆ ಜೀವಕ್ಕೆ ಹಾಗೂ ಜೀವನಕ್ಕೆ ಅಪಾಯಕಾರಿಯಾಗಿದೆ, ಶಾಲಾ ಕಾಲೇಜು ವಿದ್ಯಾರ್ಥಿಗಳು ಇಂತಹ ಮಾದಕ ವ್ಯಸನಗಳ ದುಶ್ಚಟಗಳಿಂದ ದೂರವಿರಬೇಕು, ಮಾದಕ ವ್ಯಸನಗಳ ದುಷ್ಪರಿಣಾಮಗಳಿಂದ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಲಿದೆ ಎಂದರು
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಮುನಿ ಕೃಷ್ಣಪ್ಪ, ತಾಲ್ಲೂಕು ಯೋಜನಾದಿಕಾರಿಗಳಾದ ಸುಧಾ ಭಾಸ್ಕರ್,ವಲಯ ಮೇಲ್ವಿಚಾರಕರಾದ ಅನ್ನಪೂರ್ಣ ಸೇರಿದಂತೆ ಸೇವಾಪ್ರತಿನಿಧಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.