ಶ್ರೀ ಘಾಟಿ ಸುಬ್ರಹ್ಮಣ್ಯ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ : ಜಾನುವಾರುಗಳಿಗೆ ಉಚಿತ ಮೇವು ಮತ್ತು ನೀರು ವಿತರಣೆ ಕಾರ್ಯಕ್ರಮದ ಉದ್ಘಾಟನೆಗೆ ಕ್ಷಣಗಣನೆ

Spread the love

ದೊಡ್ಡಬಳ್ಳಾಪುರ: ರೈತರ ಕಲ್ಯಾಣಕ್ಕಾಗಿ ಮತ್ತು ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪ್ರಚಾರಕ್ಕಾಗಿ ಸಮರ್ಪಿತವಾಗಿರುವ ಕ್ರಿಯಾಶೀಲ ಸಂಘಟನೆ ನವ ಕರ್ನಾಟಕ ಯುವ ಶಕ್ತಿ ವೇದಿಕೆ, ವತಿಯಿಂದ ಘಾಟಿ ಸುಬ್ರಹ್ಮಣ್ಯ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ ಭಾಗವಾಗಿ “ಉಚಿತ ಜಾನುವಾರು ಮೇವು ಮತ್ತು ನೀರು ವಿತರಣೆ” ಎಂಬ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ಈ ಕಾರ್ಯಕ್ರಮವು ಡಿಸೆಂಬರ್ 21, 2024 ರ ಶನಿವಾರ ರಂದು ಉದ್ಘಾಟನೆಗೊಳ್ಳಲಿದೆ.

 

ಈ ಕಾರ್ಯಕ್ರಮವು ಮೂಲಕ ಜಾತ್ರೆಯಲ್ಲಿ ಪಾಲ್ಗೊಳ್ಳುವ ಜಾನುವಾರಗಳಿಗೆ ಅಗತ್ಯ ಉಚಿತವಾಗಿ ಮೇವು ಮತ್ತು ನೀರು ನೀಡುವ ಮೂಲಕ ರೈತ ಸಮುದಾಯವನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ, ದನಗಳ ಜಾತ್ರೆಯಲ್ಲಿ ಪಾಲ್ಗೊಂಡಿರುವ ವಿವಿಧ ಜಿಲ್ಲೆಗಳ ರೈತರು ಈ ಕಾರ್ಯಕ್ರಮದ ಉಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ಮನವಿ ಮಾಡುತ್ತೀವೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

 

ಹೆಚ್ಚಿನ ಮಾಹಿತಿಗಾಗಿ ಅಥವಾ ಸ್ಪಷ್ಟೀಕರಣದ ಅಗತ್ಯವಿದ್ದರೆ ದಯವಿಟ್ಟು ವೇದಿಕೆ ಅಧ್ಯಕ್ಷ ಹಳ್ಳಿ ರೈತ ಅಂಬರೀಶ್ ರವರನ್ನು [ಮೊ .7259429132] ಸಂಪರ್ಕಿಸಲು ಕೋರಿದೆ.

Leave a Reply

Your email address will not be published. Required fields are marked *

© 2026 Malnad TV. All Rights Reserved.