ಶ್ರೀ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಯುಕ್ತ ಅನ್ನ ಸಂತರ್ಪಣೆ ಕಾರ್ಯಕ್ರಮ

Spread the love

ದೊಡ್ಡಬಳ್ಳಾಪುರ : ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರಾ ಮಹೋತ್ಸವದ ಅಂಗವಾಗಿ ಬಿಜೆಪಿ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಆರ್ ಪ್ರತಾಪ್ ನೇತೃತ್ವದಲ್ಲಿ ಅನ್ನದಾನ ಮಾಡಲಾಗುತ್ತಿದೆ

 

ಘಾಟಿ ದನಗಳ ಜಾತ್ರೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ರೈತರು ರಾಸುಗಳನ್ನ ಕೊಳ್ಳುವ ಮತ್ತು ಮಾರುವ ವಹಿವಾಟಿನಲ್ಲಿ ತೊಡಿಗಿಸಿ ಕೊಳ್ಳುತ್ತಾರೆ, ಜಾತ್ರೆಯಲ್ಲಿ ಭಾಗವಹಿಸಿರುವ ರೈತರಿಗೆ ಹಾಗೂ ಸಾರ್ವಜನಿಕರಿಗೆ ವಕೀಲರು ಆಗಿರುವ ಆರ್.ಪ್ರತಾಪ್ ರವರು ಅನ್ನದಾನ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ

 

ಈ ಕುರಿತು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಆರ್ ಪ್ರತಾಪ್ ಮಾತನಾಡಿ, ದನಗಳ ಜಾತ್ರೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ರೈತರು ಆಗಮಿಸಿದ್ದು , ಈ ಬಾರಿ ಜಾತ್ರೆಯು ಅದ್ದೂರಿಯಾಗಿ ನಡೆಯುತ್ತಿದೆ , ಜಾತ್ರೆಯನ್ನು ನೋಡಲು ಸಾವಿರಾರು ಸಾರ್ವಜನಿಕರು ಆಗಮಿಸುತ್ತಿದ್ದು , ಬರುವಂತಹ ಸಾರ್ವಜನಿಕರಿಗೆ ಹಾಗೂ ರೈತರಿಗೆ ಉಚಿತವಾಗಿ ಆಹಾರ ವಿತರಣೆ ಮಾಡುವ ಮೂಲಕ ಸೇವೆ ಸಲ್ಲಿಸಲಾಗುತ್ತಿದೆ , ಸತತ ನಾಲ್ಕು ದಿನಗಳಿಂದ ಆಹಾರ ವಿತರಣೆ ಮಾಡುತ್ತಿದ್ದು, ಹಸಿದವರಿಗೆ ಆಹಾರ ವಿತರಣೆ ಮಾಡುವುದು ಸಂತಸ ತಂದಿದೆ ಎಂದರು.

 

ಈ ಸಂದರ್ಭದಲ್ಲಿ ದೇವನಹಳ್ಳಿ ಒಪಿಸಿ ಮೋರ್ಚಾ ಉಪಾಧ್ಯಕ್ಷರಾದ ಸುರೇಶ್ , ಬಿಜೆಪಿ ಮುಖಂಡರಾದ ಹರೀಶ್, ಗ್ರಾಮ ಪಂಚಾಯತ್ ಸದಸ್ಯರಾದ ಕಿಟ್ಟಿ, ವಾಸು, ಮಾಜಿ ಸದಸ್ಯರಾದ ಮುನೇಗೌಡ ಇದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.