
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿಕ ಸಮಾಜಕ್ಕೆ ಜಿಲ್ಲೆಯ ಪ್ರತಿ ತಾಲ್ಲೂಕಿನಿಂದ ಒಬ್ಬರಂತೆ ಪ್ರತಿನಿಧಿಗಳನ್ನು ಹುದ್ದೆಗೆ ನೇಮಿಸಲಾಗಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿನಿಧಿಯಾಗಿ ಟಿ.ಎಂ ಅಶೋಕ್ ರವರನ್ನು ಆಯ್ಕೆ ಮಾಡಿದ್ದು, ನೂತನ ಖಜಾಂಚಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿಕ ಸಮಾಜದ ನೂತನ ಖಜಾಂಚಿಯಾಗಿ ಆಯ್ಕೆಯಾಗಿರುವ ಟಿ. ಎಂ. ಅಶೋಕ್ ರವರನ್ನು ತೂಬಗೆರೆ ಹೋಬಳಿಯ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಟಿಎಂ ಅಶೋಕ್ ಮಾತನಾಡಿ ಜಿಲ್ಲೆಯಲ್ಲಿ ಕೃಷಿಕ ಸಮಾಜದ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, ಪ್ರಸ್ತುತ ಕೃಷಿಕ ಸಮಾಜದ ಹಲವು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನೂತನ ಯೋಜನೆಗಳನ್ನು ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮಾರ್ಗದರ್ಶನದೊಂದಿಗೆ ರೂಪಿಸಲಾಗುವುದು ಎಂದರು.
Ad
ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ರವಿಕುಮಾರ್, ತೂಬಗೆರೆ ಹೋಬಳಿ ಜೆ ಡಿ ಎಸ್ ಅದ್ಯಕ್ಷರು ಹಾಗೂ ಘಾಟಿ ವಿ ಎಸ್ ಎಸ್ ಎನ್ ಅಧ್ಯಕ್ಷ ಜಗನ್ನಾಥ ಚಾರ್ಯ,ಹಾಡೋನಹಳ್ಳಿ ವಿ ಎಸ್ ಎಸ್ ಎನ್ ಅಧ್ಯಕ್ಷ ಎಂ.ಮುನೇಗೌಡ ,ತಾಲ್ಲೂಕು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ತಿಪ್ಪಾ ಪುರ ರಾಜಶೇಖರ್,ಟಿ ಎ ಪಿ ಎಂ ಸಿ ಉಪಾಧ್ಯಕ್ಷ ಲಕ್ಷ್ಮೀ ನಾರಾಯಣ,ತಿರುಮಗೊಂಡಹಳ್ಳಿ ಎಂ ಪಿ ಸಿ ಎಸ್ ಅಧ್ಯಕ್ಷ ಸಿ.ಪ್ರಕಾಶ್,ಕಾರ್ಯದರ್ಶಿ ಟಿ.ಎಂ ಪ್ರತಾಪ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.