ಜಿಲ್ಲಾಧಿಕಾರಿಗಳ ಭೇಟಿ ಯಶಸ್ವಿ : ಜ. 26 ರ ಗಣರಾಜ್ಯೋತ್ಸವ ದಿನದಂದು ಕಪ್ಪು ಭಾವುಟ ಹಾರಿಸುವ ನಿರ್ಧಾರವನ್ನು ಹಿಂಪಡೆದ ಹೋರಾಟಗಾರರು.

Spread the love

ಕೆರೆಗಳಿಗೆ ಹರಿಸುತ್ತಿರುವ ಕೊಳಚೆ ನೀರು ರಾಸಾಯನಿಕ ನೀರನ್ನು ನಿಲ್ಲಿಸಬೇಕು, ಎಂದು ಆಗ್ರಹಿಸಿ ಜನವರಿ 26ರಂದು ಅಧಿಕಾರಿಗಳ ವಿರುದ್ಧ ಜನಪ್ರತಿನಿಧಿಗಳ ವಿರುದ್ಧ ಎರಡು ಪಂಚಾಯತಿಯ ಮನೆ ಮನೆಯ ಕಪ್ಪು ಬಾವುಟವನ್ನು ಹಾರಿಸಲು ನಿರ್ಧರಿಸಿದ್ದ ಅರ್ಕಾವತಿ ನದಿ ಪಾತ್ರ ಹೋರಾಟ ಸಮಿತಿ ತನ್ನ ನಿರ್ಧಾರವನ್ನು ಹಿಂಪಡೆದಿದೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

 

 

ಮಜರಾ ಹೊಸಹಳ್ಳಿ ಮತ್ತು ದೊಡ್ಡ ತುಮಕೂರು ಗ್ರಾಮಸ್ಥರ ಹಾಗೂ ಹೋರಾಟಗಾರರ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದಿಸಿರುವ ಜಿಲ್ಲಾಧಿಕಾರಿಗಳು ಅತಿ ಶೀಘ್ರಗತಿಯಲ್ಲಿ ಕುಡಿಯುವ ನೀರು ವ್ಯವಸ್ಥೆ ಮಾಡಲಾಗುವುದು ಹಾಗೂ ಸರ್ವ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿರುವ ಹಿನ್ನಲೆ ಜನವರಿ 26ರಂದು ಗ್ರಾಮಗಳ ಪ್ರತಿ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ನಿರ್ಧರಿಸಿದ್ದ ಹೋರಾಟಗಾರರು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ.

 

 

ಈ ಹಿಂದೆ ತಾಲೂಕು ದಂಡಾಧಿಕಾರಿಗಳಾದ ವಿದ್ಯ ವಿಭಾ ರಾಥೋಡ್ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ನಡೆದಿದ್ದ ಸಭೆ ವಿಫಲಗೊಂಡ ಕಾರಣ ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರು ಹಾಗೂ ಹೋರಾಟಗಾರರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

 

Leave a Reply

Your email address will not be published. Required fields are marked *

© 2026 Malnad TV. All Rights Reserved.