ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳ ವಿರುದ್ಧ ದೂರು ನೀಡಿ

Spread the love

ಬೆಂಗಳೂರು ಗ್ರಾಮಾಂತರ ಜಿಲ್ಲೆ : ನೊಂದಾಯಿತ ಲೇವಾದೇವಿ/ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವಾರ್ಷಿಕ ಶೇಕಡಾ 16 ರಷ್ಟು ಬಡ್ಡಿ ವಿಧಿಸಬೇಕು.

 

ಹೆಚ್ಚುವರಿ ಬಡ್ಡಿ ವಿಧಿಸುತ್ತಿರುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕಂಡುಬಂದಲ್ಲಿ ಸಾರ್ವಜನಿಕರು ಕೆಳಕಂಡ ಕಛೇರಿಗೆ ದೂರು ಸಲ್ಲಿಸಬಹುದು.

 

ಸಹಕಾರ ಸಂಘಗಳ ಜಂಟಿ ನಿಬಂಧಕರ ಕಛೇರಿ, ಬೆಂಗಳೂರು ಪ್ರಾಂತ-ದೂ.ಸಂಖ್ಯೆ:080-26612911, ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ-ದೂ.ಸಂಖ್ಯೆ-080-22442152, ಸಹಕಾರ ಸಂಘಗಳ ಸಹಾಯಕ ಉಪ ನಿಬಂಧಕರ ಕಚೇರಿ ದೊಡ್ಡಬಳ್ಳಾಪುರ, ದೂ.ಸಂಖ್ಯೆ:9901539026 ಸಂಪರ್ಕಿಸಬಹುದಾಗಿದೆ ಎಂದು ಸಹಕಾರ ಸಂಘಗಳ ಉಪನಿಂಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

© 2026 Malnad TV. All Rights Reserved.