
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜರುಗಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸ್ವಯಂ ಸೇವಾ ಸಂಘ ಸಂಸ್ಥೆಯು ನೊಂದಾಯಿತ ಸಂಸ್ಥೆಯಾಗಿದ್ದು ನೊಂದಣಿ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು ಹಾಗೇ ಪ್ರತೀ ವರ್ಷ ಆಡಿಟ್ ಮಾಡಿಸಿರಬೇಕು,ಜೊತೆಗೆ 3 ವರ್ಷದ ಲೆಕ್ಕ ಪರಿಶೋಧನಾ ವರದಿ ದೃಡೀಕರಣ ಪತ್ರ ಸಲ್ಲಿಸಬೇಕು, ಮುಖ್ಯವಾಗಿ ಈ ಸಂಸ್ಥೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಅಭಿೃದ್ಧಿಗಾಗಿ 5 ವರ್ಷ ಸೇವೆ ಸಲ್ಲಿಸಿರುವ ದಾಖಲೆಯನ್ನು ಇಲಾಖೆಗೆ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವುದಕ್ಕೆ ಫೆಬ್ರವರಿ 14 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ನಂ 217, 2ನೇ ಮಹಡಿ ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ , ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ -562110, ಸಹಾಯಕ ನಿರ್ದೇಶಕರ ಕಛೇರಿ, ದೇವನಹಳ್ಳಿ ತಾಲ್ಲೂಕು ದೂ ಸ : 27681784. ದೊಡ್ಡಬಳ್ಳಾಪುರ ತಾಲ್ಲೂಕು ದೂ ಸಂ :27623681. ಹೊಸಕೋಟೆ ತಾಲ್ಲೂಕು ದೂ ಸಂ: 27931528. ನೆಲಮಂಗಲ ತಾಲ್ಲೂಕು ದೂ ಸಂ: 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.