
ದೊಡ್ಡಬಳ್ಳಾಪುರ;ನೈಟಿಂಗಲ್ಸ್ ಮೆಡಿಕಲ್ ಟ್ರಸ್ಟ್ ನ ವತಿಯಿಂದ ಆಯೋಜಿಸಿದ್ದ ಸ್ಮೃತಿ ಗ್ರಾಮ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್. ಮುನಿಯಪ್ಪ ಉದ್ಘಾಟಿಸಿದರು
ಪ್ರತಿಯೊಬ್ಬರು ತಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಂಡ ತಮ್ಮ ಜೀವನವನ್ನು ದನ್ಯವಾಗಿಸಬೇಕು ಈ ಕಾಲದಲ್ಲಿ ತಂದೆ ತಾಯಿಯವರನ್ನು ಕಡೆಗಣಿಸಿ ಅವರನ್ನು ವೃದ್ದಾಶ್ರಮಕ್ಕೆ ಸೇರಿಸುತ್ತಾರೆ ಈ ಪ್ರವೃತ್ತಿಯನ್ನು ಕಡಿಮೆ ಮಾಡಿಸಬೇಕು ನಾವು ನಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿದಾಗ ನಮ್ಮ ಜೀವನ ಅಸನಾಗುತ್ತದೆ ನೈಟಿಂಗೇಲ್ಸ್ ನ ವತಿಯಿಂದ ಹಿರಿಯರ ಆರೈಕೆಗಾಗಿ ಹಿರಿಯರ ಮರೆವನ್ನು ಕಡಿಮೆಗೊಳಿಸುವ ಸಲುವಾಗಿ ಸ್ಮೃತಿ ಗ್ರಾಮವನ್ನು ಆಯೋಜಿಸಿ ಅವರ ಆರೈಕೆ ಮಾಡುವ ಕಾರ್ಯ ಸಂತಸಕಾರವಾಗಿದೆ ಎಂದರು.
ಈ ದಿನಗಳಲ್ಲಿ ಆಸ್ಪತ್ರೆ ,ಕಾಲೇಜು,ಕಟ್ಟುವುದು ಸಾಮಾನ್ಯವಾಗಿದೆ ಅದರಲ್ಲಿ ಹಿರಿಯರ ಆರೈಕೆಯಲ್ಲಿ ನೈಟಿಂಗೇಲ್ಸ್ ಬಹಳ ಉತ್ತಮ ಕೆಲಸ ಮಾಡುತ್ತಿದ್ದಾರೆ ಇವರಿಗೆ ನಮ್ಮ ಸರ್ಕಾರದ ವತಿಯಿಂದ ಯಾವುದೇ ರೀತಿಯ ಸಹಕಾರ ಸಹಾಯ ಬೇಕಿದಲ್ಲಿ ಸಹಕರಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಟ್ರಸ್ಟ್ ನ ರಾಧಾ ಎಸ್.ಮೂರ್ತಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ,ಘಾಟಿ ಸುಬ್ರಮಣ್ಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಪ್ಪ, ಸದಸ್ಯರಾದ ಮಹೇಶ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗಂಗರತ್ನಮ್ಮ ,ಮುಖಂಡರಾದ ರವಿಸಿದ್ದಪ್ಪ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಉಪಸ್ಥಿತರಿದ್ದರು.