ಯಶಸ್ವಿಯಾಗಿ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

Spread the love

ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಲಾಯಿತು.

ಆಫ್-ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ ಸುಮಾರು 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ, ಎನ್.ಡಿ.ಆರ್.ಎಫ್ ಸಿಬ್ಬಂದಿ, ಅಗ್ನಿಶಾಮಕ ದಳ, 12 ಆಂಬ್ಯುಲೆನ್ಸ್ ವಾಹನಗಳು, ವೈದ್ಯರು ಸೇರಿದಂತೆ ವಿವಿಧ ಇಲಾಖೆಗಳಿಂದ ಸುಮಾರು 100 ಪ್ರತಿನಿಧಿಗಳು ಭಾಗವಹಿಸಿದ್ದರು.

 

ಈ ಅಣುಕು ಪ್ರದರ್ಶನವನ್ನು ನೈಜ ಘಟನೆಯಂತೆ ಬಿಂಬಿಸಲಾಗಿತ್ತು. ಎಮ್/ಎಸ್ ಎಲ್.ಪಿ.ಜಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್. ಬಿ.ಪಿ.ಸಿ.ಎಲ್ ಎಲ್.ಟಿ.ಡಿ, ಎಂ.ಪಿ.ಸಿ.ಎಲ್ ಎಲ್.ಟಿ.ಡಿ ಕಾರ್ಖಾನೆಯ 20 ಕಾರ್ಮಿಕರು ರಾಸಾಯನಿಕ ಸೋರಿಕೆಯಿಂದ ಗಾಯಗೊಂಡರು, ಎನ್.ಡಿ.ಆರ್.ಎಫ್ ತಂಡ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲಾಯಿತು. ಈ ರಾಸಾಯನಿಕ ದುರಂತ ಅಣುಕು ಪ್ರದರ್ಶನದಿಂದ 3 ಕಾರ್ಖಾನೆಗಳಿಂದ ಸುಮಾರು 400 ಕಾರ್ಮಿಕರನ್ನು ರಕ್ಷಿಸಿ ವಾಗಟ ಗ್ರಾಮದ ಪುನರ್ವಸತಿ ಕೇಂದ್ರ ಕ್ಕೆ ಸ್ಥಳಾಂತರಿಸಲಾಯಿತು.

ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.

 

ಅಣುಕು ಪ್ರದರ್ಶನದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಗಳಾದ ದುರ್ಗಾಶ್ರೀ, ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ನವನೀತ ಮೋಹನ್ ಎನ್, ಹೊಸಕೋಟೆ ತಹಶೀಲ್ದಾರ್, ಸೋಮಶೇಖರ್, ಇ.ಒ ನಾರಾಯಣಸ್ವಾಮಿ, ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹಮೂರ್ತಿ ಎಸ್ಎ, ಎಂ ಎ ಸೋಮಶೇಖರ್, ವಿ ತಿಮ್ಮರಾಜು, IOCL LPG ಯ ವ್ಯವಸ್ಥಾಪಕರಾದ ಜೆ ಭರತ್ ಕುಮಾರ್, ಉಪ ಪ್ರಧಾನ ವ್ಯವಸ್ಥಾಪಕರಾದ, ಡ್ಯಾನಿ ಜಾನ್ ಬೆಜೋಯ್, BPCL ಮುಖ್ಯ ವ್ಯವಸ್ಥಾಪಕರಾದ ಅಲೋಕ್ ಚಕ್ರವರ್ತಿ,HPCL ಟರ್ಮಿನಲ್ ನ ಉಪ ವ್ಯವಸ್ಥಾಪಕರಾದ ಪ್ರಶಾಂತ್ ಬೇಕಲ್, MRPL ಮುಖ್ಯ ವ್ಯವಸ್ಥಾಪಕರಾದ ಅರ್ನಾಬ್,MD, PETRONET MHBL ಮತ್ತು ಭಾಗೀದಾರ ಇಲಾಖೆಗಳ ಪ್ರತಿನಿಧಿಗಳು, ವೀಕ್ಷಕರು ಮತ್ತು ವಿಪತ್ತು ನಿರ್ವಹಣಾ ತಜ್ಞೆ ಸ್ಮಿತಾ ಟಿ.ಎಲ್ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.