
ದೊಡ್ಡಬಳ್ಳಾಪುರ : ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ(47-74/75)ಯ ಹೆಸರನ್ನು ಬಳಕೆ ಮಾಡಿ, ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಂಘಟನೆಯ ಕಾರ್ಯಕರ್ತರು ಶಿಬಿರ ಬಳಿಯ ಪ್ರತಿಭಟನೆ ನಡೆಸಿದ್ದಾರೆ ಹಾಗೂ ಸಂಘಟನೆಯ ಬ್ಯಾನರ್ ತೆಗೆಯುವಂತೆ ಆಗ್ರಹಿಸಿದ್ದಾರೆ.
ತಾಲೂಕಿನ ಬೆಸೆಂಟ್ ಪಾರ್ಕ್ ನಲ್ಲಿ ಹೆಣ್ಣೂರು ಶ್ರೀನಿವಾಸ್ ರವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಮೂರು ದಿನಗಳ ಅಧ್ಯಯನ ಶಿಬಿರವನ್ನು ನಡೆಸುತ್ತಿದ್ದಾರೆ, ಅಧ್ಯಯನ ಶಿಬಿರವನ್ನ ಕರ್ನಾಟಕ ದಲಿತ ಸಂಘರ್ಘ ಸಮಿತಿಯ ಹೆಸರಿನಲ್ಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬೆಸೆಂಟ್ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕರಾದ ನೆಲಮಂಗಲ ಬಸವರಾಜು ಮಾತನಾಡಿ ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ (47-74/75)ಯನ್ನು ರಾಜ್ಯ ಸಂಚಾಲಕರಾದ ಶಿವಮೊಗ್ಗ ಎಂ.ಗುರುಮೂರ್ತಿಯವರು ರಾಜ್ಯದ ಎಲ್ಲಾ ಜಿಲ್ಲೆ, ತಾಲ್ಲೂಕು ಹಾಗೂ ಹೋಬಳಿ ಮಟ್ಟಗಳಲ್ಲಿ ಸಂಘಟಿಸುವ ಮೂಲಕ ಬಲಿಷ್ಠ ಸಂಘಟನೆಯನ್ನಾಗಿ ಮಾಡಿದ್ದಾರೆ, ಸಂಘಟನೆ ಹಕ್ಕುದಾರಿಕೆಗಾಗಿ 11 ವರ್ಷಗಳ ಕಾಲ ನಿರಂತರ ಹೋರಾಟವನ್ನ ಮಾಡಿದ್ದಾರೆ, ಶಿವಮೊಗ್ಗ ಸಿವಿಲ್ ಕೋರ್ಟ್ , ಭದ್ರಾವತಿ ಸಿವಿಲ್ ಕೋರ್ಟ್ ಮತ್ತು ಹೈಕೋರ್ಟ್ ನಲ್ಲಿ ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಘಟನೆ ಎಂ.ಗುರುಮೂರ್ತಿಯವರಿಗೆ ಸೇರಿದ್ದು ಎಂದು ತೀರ್ಪು ನೀಡಲಾಗಿದೆ ಆದರೆ ಇಂದು ನಮ್ಮ ಸಂಘಟನೆಯ ಬ್ಯಾನರ್ ಅಡಿಯಲ್ಲಿ ನಮಗೆ ಯಾವುದೇ ಮಾಹಿತಿ ನೀಡದೆ ಅಧ್ಯಯನ ಶಿಬಿರ ಆಯೋಜನೆ ಮಾಡಿರುವುದು ಖಂಡನೀಯ ನಾವು ಯಾವುದೇ ಕಾರ್ಯಕ್ರಮ ನಿಲ್ಲಿಸಲು ಬಯಸುವುದಿಲ್ಲ ,, ಆದರೆ ನಮ್ಮ ಸಂಘಟನೆಯ ಬ್ಯಾನರ್ ಅಡಿಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ನಮಗೆ ನೋವುಂಟು ಮಾಡಿದೆ ಕೂಡಲೇ ಬ್ಯಾನರ್ ತೆಗೆಯಬೇಕೆಂದು ಕಾರ್ಯಕ್ರಮ ಆಯೋಜಕರನ್ನು ಒತ್ತಾಯಿಸಿದರು
ಬೆಂಗಳೂರು ಜಿಲ್ಲಾ ಸಂಚಾಲಕರಾದ ರಾಮಮೂರ್ತಿ(ರಾಮು)ನೇರಳಘಟ್ಟ ಮಾತನಾಡಿ ಕೋರ್ಟ್ ತೀರ್ಪುಗಳು ನಮ್ಮ ಪರವಾಗಿದ್ದರೂ, ಹೆಣ್ಣೂರು ಶ್ರೀನಿವಾಸ್ ನಮ್ಮ ಸಂಘಟನೆ ಹೆಸರನ್ನು ಬಳಸಿಕೊಂಡು ಶಿಬಿರವನ್ನ ನಡೆಸುತ್ತಿದ್ದಾರೆ, ಸಂಘಟನೆ ಬ್ಯಾನರ್ ಬಳಸದಂತೆ ವಿನಂತಿ ಮಾಡಲಾಗಿದೆ ಆದರೆ ಅವರು ನಮ್ಮ ಯಾವುದೇ ಮನವಿಗಳಿಗೆ ಸ್ಪಂದಿಸದ ಕಾರಣ ಹೋರಾಟಕ್ಕೆ ಮುಂದಾಗಿದ್ದೇವೆ, ಸಮಾಜದಲ್ಲಿ ಬಿರುಕು ಮೂಡಿಸುವ ಮತ್ತು ಸಮುದಾಯದ ಜನತೆಯಲ್ಲಿ ಗೊಂದಲ ಸೃಷ್ಟಿ ಮಾಡುವ ಇಂತಹ ಕಾರ್ಯಗಳನ್ನು ನಾವು ಎಂದಿಗೂ ಪ್ರೋತ್ಸಾಹಿಸುವುದಿಲ್ಲ , ನಾವು ಕಾರ್ಯಕ್ರಮಕ್ಕೆ ತೊಂದರೆ ನೀಡುವುದಿಲ್ಲ ನಮ್ಮ ಆಗ್ರಹ ನಮ್ಮ ಸಂಘಟನೆ ಬ್ಯಾನರ್ ಬಳಸ ಬೇಡಿ ಎನ್ನುವುದು ಅಷ್ಟೇ, ಬ್ಯಾನರ್ ತೆಗೆಯುವವರೆಗೂ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಪ್ರತಿಭಟನಾಕಾರರು ಅಧ್ಯಯನ ಶಿಬಿರದ ಮುಂಭಾಗದಲ್ಲಿ ಕುಳಿತು ಶಿಬಿರದ ಆಯೋಜಕರಿಗೆ ಧಿಕ್ಕಾರ ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಬಸವರಾಜು,ಬೆಂಗಳೂರು ಜಿಲ್ಲಾ ಸಂಚಾಲಕ ರಾಮಮೂರ್ತಿ (ರಾಮುನೇರಳಘಟ್ಟ), ಜಿಲ್ಲಾ ಮಹಿಳಾ ಸಂಚಾಲಕರಾದ ನಾಗರತ್ನಮ್ಮ , ದೊಡ್ಡಬಳ್ಳಾಪುರ ತಾಲ್ಲೂಕು ಸಂಘಟನ ಸಂಚಾಲಕರು ಜಿ.ನರಸಿಂಹಮೂರ್ತಿ,ದೊಡ್ಡಬಳ್ಳಾಪುರ ತಾಲ್ಲೂಕು ಸಂಘಟನಾ ಸಂಚಾಲಕ ಬೈಲಾಂಜಿನಮೂರ್ತಿ, ಎನ್.ನರಸಿಂಹಮೂರ್ತಿ,ಮನೋಜ್.ವಿ, ನಾಗರತ್ನಮ್ಮ ಮಲ್ಲೋಹಳ್ಳಿ, ಆನಂದ್ ಸಕ್ಕರೆ ಗೊಲ್ಲಹಳ್ಳಿ, ಹನುಮಂತಯ್ಯ, ಹನುಮಯ್ಯ, ತಾಲ್ಲೂಕು ಸಂಘಟನಾ ಸಂಚಾಲಕರಾದ ನಂದಿಗುಂದ ಮೈಲಾರಪ್ಪ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.