
ದೊಡ್ಡಬಳ್ಳಾಪುರ : ಡಾ.ಪುನೀತ್ ರಾಜಕುಮಾರ್ ರವರ 50 ನೇ ಹುಟ್ಟು ಹಬ್ಬದ ಅಂಗವಾಗಿ ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟ್ಸ್ ಬುಕ್ ಪೆನ್ನು ಪೆನ್ಸಿಲ್ ವಿತರಣಾ ಕಾರ್ಯಕ್ರಮವನ್ನು ಮಾಡಲಾಯಿತು
ಇಲ್ಲಿನ ವಿವೇಕಾನಂದ ನಗರದಲ್ಲಿ ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ನಟ ಡಾ. ಪುನೀತ್ ರಾಜಕುಮಾರ್ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು, ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಅನ್ನದಾಸೋಹ ಏರ್ಪಡಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ಕಾರ್ಯಕ್ರಮದ ಆಯೋಜಕ ಹಾಗೂ ಅಪ್ಪು ಅಭಿಮಾನಿ ನರಸಿಂಹಮೂರ್ತಿ ಮಾತನಾಡಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ರವರ ಜೀವನವೇ ಒಂದು ಆದರ್ಶ ಅವರ ಸೇವಾ ಕಾರ್ಯಗಳು ನಮ್ಮೆಲರಿಗೂ ಸ್ಫೂರ್ತಿ,ಅವರ ಅಭಿಮಾನಿಗಳಾಗಿ ನಾವು ನಮ್ಮ ಕೈಲಾದ ಸೇವೆಯನ್ನು ಸಮಾಜಕ್ಕೆ ಮಾಡುವ ಮೂಲಕ ಹೆಮ್ಮೆಯ ಅಭಿಮಾನಿಯಾಗಿ ಜೀವಿಸುತ್ತೇವೆ ಎಂದರು.
ಈ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು,ಕಿಚ್ಚ ಸುದೀಪ್ ಅಭಿಮಾನಿಗಳು, ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳು ಪಾಲ್ಗೊಂಡು ಸಂಭ್ರಮಿಸಿರುವುದು ವಿಶೇಷ ಅಪ್ಪು ಎಂದರೆ ಎಲ್ಲರಿಗೂ ಅಚ್ಚುಮೆಚ್ಚು ,ಇಂದಿನ ದಿನವನ್ನು ನಾವು ಶಾಲಾ ಮಕ್ಕಳಿಗೆ ಅಗತ್ಯ ಪರಿಕರಗಳ ವಿತರಣೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿದ್ದೇವೆ. ಪುಟ್ಟ ಮಕ್ಕಳ ನಗುವಿನಲ್ಲಿ ನಮ್ಮ ನೆಚ್ಚಿನ ನಟ ಅಪ್ಪು ಅವರನ್ನು ಕಾಣುತ್ತೇವೆ ಎಂದು ಭಾವುಕರಾದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಶಬೀರ್,ಗುರುಪ್ರಸಾದ್,ದಯಾನಂದ,ನಾಗರಾಜು (ಹೊಡ್ಲು ),ಅಶ್ವಥ್,ಚೇರ್ಮನ್ ಮಹೇಶ್,ಪಿ ಸಿ.ನಾರಾಯಣ ಮೂರ್ತಿ,ದೇವರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.