
ಯುಗಾದಿ ಮತ್ತು ರಂಜಾನ್ ಹಬ್ಬದ ಧಾರ್ಮಿಕ ಆಚರಣೆಯ ಮೆರವಣಿಗೆ ಇತ್ಯಾದಿ ಕಾರ್ಯಕ್ರಮಗಳಿದ್ದಲ್ಲಿ ಅನುಮತಿ ಮೇರೆಗೆ ಶಾಂತಿಯುತವಾಗಿ ಆಚರಿಸಲು ಸೂಚಿಸಲಾಗಿದೆ.
ಪ್ರಮುಖ ಅಂಶಗಳು :
1.ಯಾವುದೇ ಧಾರ್ಮಿಕ ವಿಚಾರವಾಗಿ ಪ್ರಚೋದನಾಕಾರಿ ಪೋಸ್ಟ್ ಅಥವಾ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದು ಅಪರಾಧ.
2.ಬೆಂಗಳೂರು ಜಿಲ್ಲಾ ಸರಹದ್ದಿನಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
3.ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಪ್ರಚೋದನಾಕಾರಿ ಬರವಣಿಗೆ, ಸಂದೇಶ ಹಾಗೂ ಭಾಷಣ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವದು.
4.ಜೂಜು, ಮಟ್ಕಾ, ಇಸ್ಪೀಟ್ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ ವಹಿಸಲಾಗುವದು.
5.ಯಾವುದೇ ಮತೀಯ ಗಲಭೆ ಮತ್ತು ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವದು.
6.ಯುಗಾದಿ ಮತ್ತು ರಂಜಾನ್ ಹಬ್ಬದ ವೇಳೆಯಲ್ಲಿ ಹೆಚ್ಚಿನ ಜನಸಂದನಿಯಲ್ಲಿ ನಿಮ್ಮ ಆಭರಣ ಮತ್ತು ಬೆಲೆ ಬಾಳುವ ವಸ್ತುಗಳ ಮೇಲೆ ಗಮನವಿರಲಿ.
7.ಸಂಚಾರ ಮತ್ತು ಪಾರ್ಕಿಂಗ್ ನಿಯಮ ಉಲ್ಲಂಘನೆ ಮಾಡಿದಲ್ಲಿ ಸ್ಥಳದಂಡ ಅಥವಾ ಕ್ರಮ ವಹಿಸಲಾಗುವದು ಅಲ್ಲದೇ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.