
ಮೈಸೂರು : ದೇಶಕ್ಕೆ ಸಂವಿಧಾನ ನೀಡಿದ ವಿಶ್ವ ಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ, ಫ್ಲೆಕ್ಸ್ ಗಳನ್ನು ವಿಕೃತಿ ಮಾಡಿ , ಹೊಲಸು ಎರಚಿ, ನೀಲಿ ಧ್ವಜಗಳನ್ನು ಹರಿದು ವಿಕೃತಿ ಮೆರೆದಿರುವ ದುರ್ಘಟನೆ ಮೈಸೂರಿನ ವಾಜಮಂಗಲದಲ್ಲಿ ನೆಡೆದಿದೆ.
ಏಪ್ರಿಲ್ 14 ರಂದು ಇಲ್ಲಿನ ಸಿದ್ಧಾರ್ಥ ಯುವಕರ ಸಂಘವು ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಆಚರಿಸಿ, ಮೆರವಣಿಗೆ, ಅನ್ನದಾನ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಗಿತು,ಈ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಡಾ. ಅಂಬೇಡ್ಕರ್ ಅವರ ಫ್ಲೆಕ್ಸ್, ಕಟೌಟ್ ಗಳನ್ನು ಹರಿದು ವಿಕೃತಿ ಮೆರೆಯಲಾಗಿದೆ. ನೀಲಿ ಧ್ವಜಗಳನ್ನು ಹರಿದು ಹಾಕಲಾಗಿದೆ. ಶುಕ್ರವಾರ ಮಧ್ಯರಾತ್ರಿ ಮುಂಜಾನೆ 3ರ ನಡುವೆ ಈ ಕೃತ್ಯ ನಡೆದಿದ್ದು, ವಾಜಮಂಗಲ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣಾ ವ್ಯಾಪ್ತಿಗೆ ಬರುವ ವಾಜಮಂಗಲದಲ್ಲಿ ಈ ಕೃತ್ಯ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ.
ನೀಚರ ಈ ಕೃತ್ಯದಿಂದ ರೊಚ್ಚಿಗೆದ್ದಿರುವ ಗ್ರಾಮಸ್ಥರು ಬೀದಿಗಿಳಿದಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.