ಜಾತಿಗಣತಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಜನಗಣತಿ ಪೂರಕ – ರವಿಕುಮಾರ್

Spread the love

ದೇಶದಲ್ಲಿನ ಪ್ರತಿ ಸಮುದಾಯಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಸ್ತವಿಕ ದತ್ತಾಂಶ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾತಿಗಣತಿ ಮಾಡುವ ಐತಿಹಾಸಿಕ ನಿಲುವನ್ನು ಕೈಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ರವಿಕುಮಾರ್ ತಿಳಿಸಿದರು.

ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಾತಿ ಗಣತಿ ಕುರಿತು ಕೇಂದ್ರ ಸರ್ಕಾರ ಸಮೀಕ್ಷೆ ನಡೆಸುವ ನಿರ್ಧಾರ ಕೈಗೊಂಡಿದೆ,1931ರಲ್ಲಿ ಬ್ರಿಟಿಷ್ ಸರ್ಕಾರ ಈ ಜಾತಿಗಣತಿ ಕಾರ್ಯಕ್ರಮವನ್ನು ಕೈಗೊಂಡಿತ್ತು. ಆದರೆ ಸ್ವಾತಂತ್ರ್ಯ ನಂತರ ಯಾವುದೇ ಜಾತಿಗಣತಿ ನೆಡೆದಿಲ್ಲ. ಈ ಕುರಿತಂತೆ ಕೇಂದ್ರ ಸರ್ಕಾರ ಸಾಕಷ್ಟು ಚಿಂತನೆ ನಡೆಸಿ ಜಾತಿಗಣತಿ ಮಾಡುವ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. 140 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ನಮ್ಮ ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರತಿ ಸಮುದಾಯಗಳ ಅಭಿವೃದ್ಧಿ ತಿಳಿಯುವ ನಿಟ್ಟಿನಲ್ಲಿ ಈ ಸಮೀಕ್ಷೆ ನೆಡೆಯಲಿದೆ ಎಂದರು.

 

ಜನಗಣತಿಯನ್ನ  ಕಾಂಗ್ರೆಸ್  ಏಕೆ ಮಾಡಲಿಲ್ಲ.????

 

ಕಳೆದ 75 ವರ್ಷಗಳಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿದ್ದ ಸಂದರ್ಭದಲ್ಲಿ ಏಕೆ ಜಾತಿಗಣತಿ ಮಾಡಲಿಲ್ಲ. 2011 ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅಧಿಕಾರದ ಅವಧಿಯಲ್ಲಿ ಮಾಡಿದ ಸಮೀಕ್ಷೆ ವರದಿ ಅಪೂರ್ಣ ಎಂದು ಮುನ್ನಲೆಗೆ ತರಲೆ ಇಲ್ಲ. ಇಂದು ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಕಾಂಗ್ರೆಸ್ ಪ್ರಮುಖರು ಪ್ರಶ್ನೆ ಮಾಡುತ್ತಿದ್ದಾರೆ. ಪ್ರತಿ ಸಮುದಾಯಕ್ಕೂ ನ್ಯಾಯ ಕೊಡಿಸುವ ಸಲುವಾಗಿ ಈ ಜಾತಿಗಣತಿ ಸಮೀಕ್ಷೆ ನೆಡೆಯಲಿದೆ ಈ ಕಾರ್ಯಕ್ಕೆ ಕಾಂಗ್ರೆಸ್ ಬೆಂಬಲಿಸಿದರೆ ಸ್ವಾಗತಿಸುತ್ತೇವೆ ಎಂದರು .

ಪಕ್ಷದ ಮುಖಂಡರಾದ ಲಕ್ಷ್ಮಿನಾರಾಯಣ, ರಾಜ್ಯ ಕಾರ್ಯದರ್ಶಿ ನಿಚ್ಚಿತ, ಎಸ್.ಸಿ ಮೋರ್ಚಾ ಅಧ್ಯಮ್ಷ ಬುಳ್ಳಳ್ಳಿ ರಾಜಪ್ಪ, ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮತ್ತಿತ್ತರರು ಇದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.