
ದೊಡ್ಡಬಳ್ಳಾಪುರ : ನೆನ್ನೆ ತಾನೇ ಜೆಡಿಎಸ್ ಜಿಲ್ಲಾ ಮತ್ತು ತಾಲ್ಲೂಕು ಘಟಕ ಪತ್ರಿಕಾ ಗೋಷ್ಠಿ ನೆಡೆಸಿ ತನ್ನ ಅಧಿಕೃತ ಅಭ್ಯರ್ಥಿಯಾಗಿ ಹುಸ್ಕೂರ್ ಟಿ ಆನಂದ್ ರವರನ್ನು ಘೋಷಣೆ ಮಾಡಿತ್ತು, ಕಾಂಗ್ರೆಸ್ ಬಮೂಲ್ ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಯನ್ನು ಹಾಕದೆ ಕುತೂಹಲ ಮೂಡಿಸಿತ್ತು ಇಂದು ಆ ಕುತೂಹಲಕ್ಕೆ ತೆರೆ ಬಿದಿದ್ದೆ.
ಹೌದು ಸ್ಥಳೀಯ ಕಾಂಗ್ರೆಸ್ ಪಕ್ಷವು ತನ್ನ ಬಾಹ್ಯ ಬೆಂಬಲ ಸುಚಿಸುವ ಮೂಲಕ ಜೆಡಿಎಸ್ ಪಕ್ಷದ ಅಭ್ಯರ್ಥಿಗೆ ಯಾವುದೇ ಷರತ್ತು ವಿಧಿಸದೆ ಬೆಂಬಲ ಸೂಚಿಸಿದೆ.
ನಗರದ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಮಾಜಿ ಶಾಸಕರಾದ ಟಿ. ವೆಂಕಟರಮಣಯ್ಯ ಮಾತನಾಡಿ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಹಾಗೂ ಪಕ್ಷದ ವರಿಷ್ಟರಾದ ಡಿಕೆ ಸುರೇಶ್, ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ಒಳಗೊಂಡತೆ ಹಲವು ಹಿರಿಯ ಪ್ರಮುಖರ ಜೊತೆ ಚರ್ಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ, ಕ್ರಮ ಸಂಖ್ಯೆ 2 ಹಣ್ಣಿನ ಬುಟ್ಟಿ ಚಿನ್ಹೆ ಹೊಂದಿರುವ ಜೆಡಿಎಸ್ ಪಕ್ಷದ ಅಭ್ಯರ್ಥಿ ಹುಸ್ಕೂರ್ ಟಿ ಆನಂದ್ ರವರನ್ನು ಬೆಂಬಲಿಸಿ ಹಾಲು ಉತ್ಪಾದಕರ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು
ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಟಿ ಆನಂದ್ ಮಾತನಾಡಿ ಯಾವುದೇ ಷರತ್ತು ವಿಧಿಸದೇ ನನಗೆ ಬೆಂಬಲ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ನಾನು ಅಬಾರಿಯಾಗಿದ್ದೇನೆ, ಈ ಬೆಂಬಲ ಕುರಿತು ನಮ್ಮ ಜೆಡಿಎಸ್ ಪಕ್ಷದ ವರಿಷ್ಟರ ಸಲಹೆ ಮೇರೆಗೆ ಈ ನಿರ್ಧಾರಕ್ಕೆ ಮುಂದಾಗಿದ್ದು, ಸ್ಥಳೀಯವಾಗಿ ನಮಗೆ ಬೆಂಬಲ ಸೂಚಿಸಿರುವ ಮಾಜಿ ಶಾಸಕರಿಗೆ ಹಾಗೂ ಕಾಂಗ್ರೆಸ್ ಮುಖಂಡರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.