
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಮರದಿಂದ ಬಿದ್ದು ಗಂಬೀರ ಗಾಯಗೊಂಡಿದ್ದ ರಮೇಶ್ ರವರಿಗೆ 30,000 ರೂ ಕ್ರಿಟಿಕಲ್ ಫಂಡ್ ವಿತರಣೆ ಮಾಡಲಾಯಿತು.
ತಾಲ್ಲೂಕಿನ ಮಧುರೆ ಹೋಬಳಿಯ ಮದಗೊಂಡನಹಳ್ಳಿ ಗ್ರಾಮದ ರಮೇಶ್ ಎಂಬುವರು ಮರದಿಂದ ಬಿದ್ದು ಗಂಬೀರ ಗಾಯಗೊಂಡಿದ್ದು,ಅವರ ಚಿಕಿತ್ಸೆಗಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಮಂಜೂರು ಮಾಡಿರುವ 30,000 ರೂ ಕ್ರಿಟಿಕಲ್ ಫಂಡ್ ನ್ನು ಮಾನ್ಯ ಯೋಜನಾಧಿಕಾರಿ ಯವರಾದ ದಿನೇಶ್ ರವರು ಹಸ್ತಾಂತರಿಸಿದರು.
ಈ ಸಮಯದಲ್ಲಿ ಯೋಜನೆಯ ವಲಯ ಮೇಲ್ವಿಚಾರಕರಾದ ಗಿರಿಜಾ, ಸೇವಾಪ್ರತಿನಿಧಿ ಜಯಮ್ಮ, ಒಕ್ಕೂಟದ ಅಧ್ಯಕ್ಷರಾದ ಮಂಜುಳ, ಆಶಾ ಕಾರ್ಯಕರ್ತೆ, ಸಂಘದ ಸದಸ್ಯರು ಉಪಸ್ಥಿತರಿದ್ದರು