
ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ನಗರಸಭೆ ಕಾರ್ಯಾಲಯದ ಮೇಲೆ ಇಂದು ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ
ಸಾರ್ವಜನಿಕರ ದೂರಿನ ಹಿನ್ನಲೆ ದೊಡ್ಡಬಳ್ಳಾಪುರ ನಗರಸಭೆ ಮೇಲೆ ಲೋಕಾಯುಕ್ತ ಎಸ್ ಪಿ ಪವನ್ ನೆಜ್ಜುರ್ ನೇತೃತ್ವದಲ್ಲಿ ದಾಳಿ ನೆಡೆಸಿರುವ ಅಧಿಕಾರಿಗಳು ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಕಚೇರಿಯ ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಸದ್ಯ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ವಿಚಾರಣೆಯನ್ನ ನಡೆಸುತ್ತಿದ್ದಾರೆ, ಮೂಲಗಳ ಪ್ರಕಾರ ಸಾರ್ವಜನಿಕರೊಬ್ಬರ ದೂರಿನ ಹಿನ್ನಲೆ ಲೋಕಾಯಕ್ತ ದಾಳಿ ನಡೆದಿದೆ ಎನ್ನಲಾಗಿದೆ.
ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಇತ್ತೀಚಿಗೆ ಹಲವಾರು ಲಂಚ ಪ್ರಕರಣಗಳು ಸಾಮಾಜಿಕ ಜಾಲತಾಣಗಳ ಮೂಲಕ ಬಹಳ ಸದ್ದು ಮಾಡಿತ್ತು ಅಲ್ಲದೇ ಇ-ಖಾತಾ ಅಂದೋಲನ ನೆಡೆಯುತ್ತಿರುವ ಹಿನ್ನಲೆ ಇ-ಖಾತೆ ಮಾಡಿಕೊಡುವಲ್ಲಿ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂಬ ಮಾತುಗಳು ಸಾಮಾಜಿಕ ವಲಯದಲ್ಲಿ ಕೇಳಿಬಂದಿದ್ದವು ಇದಕ್ಕೆ ಸಂಬಂಧಪಟ್ಟಂತೆ ಹಲವಾರು ಸಂಘಟನೆಗಳು ಪ್ರತಿಭಟನೆ ಮಾಡಿದ್ದೂ, ದಾಳಿಯ ಹಿನ್ನೆಲೆ ಏನೆಂಬುದು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸದೆ.