SKDRDP ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ

Spread the love

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರದ ರೋಜಿಪುರದಲ್ಲಿ ಉಚಿತ ಕಣ್ಣಿನ ತಪಾಸಣಾ ಹಾಗೂ ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

 

ತಾಲ್ಲೂಕು ಯೋಜನಾಧಿಕಾರಿಯಾದ ದಿನೇಶ್ ಎನ್.ಆರ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆ ಸಹಕಾರದಿಂದ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಉಚಿತ ಕಣ್ಣಿನ ತಪಾಸಣೆ ಅಷ್ಟೇ ಅಲ್ಲದೇ ಉಚಿತವಾಗಿ ಕನ್ನಡಕ ವಿತರಣೆ ಮಾಡುತ್ತಿದ್ದು, ಅವಶ್ಯಕತೆ ಇದ್ದಲ್ಲಿ ಕಣ್ಣಿನ ಆಪರೇಷನ್ ಮಾಡುವ ಅವಕಾಶವು ನಮ್ಮ ಯೋಜನೆ ಮಾಡಲಿದೆ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ದೃಷ್ಠಿ ಕಣ್ಣಿನ ಆಸ್ಪತ್ರೆ ನೇತ್ರಾದಿಕಾರಿ ನಾಯ್ಡ,ಜನಜಾಗೃತಿ ಸದಸ್ಯರಾದ ರಮೇಶ್, ನಗರ ಸಭೆ ಸದಸ್ಯರಾದ ಹಂಸಪ್ರಿಯಾ, ಒಕ್ಕೂಟ ಅಧ್ಯಕ್ಷರಾದ ನಾಗರತ್ನ ವಲಯದ ಮೇಲ್ವಿಚಾರಕರಾದ ಗಿರೀಶ್ , ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಛಾಯಾ ಕುಮಾರಿ ಹಾಗೂ ಸೇವಾಪ್ರತಿನಿಧಿ ಅನಿತಾ, ಸಂಘದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.