ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ : ಉತ್ತಮ ಶಿಕ್ಷಣ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಿ – ಪೊಲೀಸ್ ಇನ್ಸ್ಪೆಕ್ಟರ್ ಸಾದಿಕ್ ಪಾಷಾ

Spread the love

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ಇವರ ವತಿಯಿಂದ ನಗರದ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಉದ್ಘಾಟನೆ ಮಾತನಾಡಿದರು, ಶಾಲಾ ಮಕ್ಕಳಿಗೆ ಮಾದಕ ವಸ್ತು ಬಗ್ಗೆ ಮಾಹಿತಿ ನೀಡಿದರು ಮಾದಕ ವಸ್ತುಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು ಹಾಳು ಮಾಡಿಕೊಳ್ಳದೇ ಉತ್ತಮ ಶಿಕ್ಷಣ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಮಾಹಿತಿ ನೀಡಿದರು.

ನಿವೃತ್ತ ಉಪನ್ಯಾಸಕರಾದ ಮಹಾಲಿಂಗಯ್ಯ ಮಾತನಾಡಿ ದುಶ್ಚಟಗಳಿಂದ ಆಗುವ ಪರಿಣಾಮ ಬಗ್ಗೆ ಮಾಹಿತಿ ನೀಡಿದರು,ಕಾನೂನು ಕ್ರಮ ಬಗ್ಗೆ ಮಾಹಿತಿ ನೀಡಿದರು ವಿದ್ಯಾರ್ಥಿಗಳು ಮಾದಕ ವಸ್ತುವಿಂದ ದೂರವಿರಬೇಕು ಹಾಗೂ ತಂದೆ ತಾಯಿ ಗುರುಗಳ ಮಾತುಗಳನ್ನು ಕೇಳಿ ಸಮಾಜಕ್ಕೆ ಉತ್ತಮ ಪ್ರಜೆ ಆಗಬೇಕೆಂದು ತಿಳಿಸಿದರು,

ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಹೇಮಾವತಿ,ಉಪನ್ಯಾಸಕ ವೃಂದ, ತಾಲೂಕಿನ ಯೋಜನಾಧಿಕಾರಿಗಳಾದ ದಿನೇಶ್ ವಲಯದ ಮೇಲ್ವಿಚಾರಕರಾದ ರಘು ಮತ್ತು ಸೇವಾಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *