ರಾಜ್ಯ ವಿ-ಕರವೇ ವತಿಯಿಂದ ತಾಲ್ಲೂಕಿನ ವೈದ್ಯರಿಗೆ ಸನ್ಮಾನ

Spread the love

ದೊಡ್ಡಬಳ್ಳಾಪುರ: ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ( ರಿ ) ವತಿಯಿಂದ ಸನ್ಮಾನಿಸಲಾಯಿತು.

 

ತಾಲ್ಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಗಿರೀಶ್ ಮತ್ತು ಮಹಿಳಾ ವೈದ್ಯೆ ಡಾ. ಅರ್ಚನಾ ರವರನ್ನು ವೈದ್ಯರ ದಿನಾಚರಣೆ ಅಂಗವಾಗಿ ಸನ್ಮಾನಿಸಿ ಗೌರವಿಸಲಾಯಿತು.

 

ಈ ಸಮಯದಲ್ಲಿ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ್, ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ್, ಪ್ರಮುಖರಾದ ಚಂದ್ರು ಸೋಮು, ಮಹಿಳಾ ಘಟಕದ ರಾಜ್ಯ ಪದಾಧಿಕಾರಿಗಗಳಾದ ಕುಮುದ ಜಗದೀಶ್ ಸೇರಿದಂತೆ ಹಲವರು ಹಾಜರಿದ್ದರು.

Leave a Reply

Your email address will not be published. Required fields are marked *

© 2026 Malnad TV. All Rights Reserved.